BREAKING NEWS

ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ: ಭರ್ತಿಯಾದ ತ್ರಿವೇಣಿ ಸಂಗಮ!

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ.

ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ ತ್ರಿವೇಣಿ ಸಂಗಮದಲ್ಲಿ ಹೆಚ್ಚು ನೀರು ಹರಿಯುತ್ತಿದೆ.

ಭಾಗಮಂಡಲ ತಲಕಾವೇರಿಗೆ ಭಕ್ತಾದಿಗಳ ಸಂಖ್ಯೆ ಇಂದು ಬೆಳಿಗ್ಗೆ ಕ್ಷಿಣಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಅಭಿವೃದ್ಧಿಪಡಿಸಲಾದ ಉದ್ಯಾನವನ ಸಂಪೂರ್ಣವಾಗಿ ಜಲಾವೃತ ವಾಗಿದೆ.

ನಾಪೋಕ್ಲು- ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ನಿರ್ಮಾಣದಿಂದ ಸಂಪರ್ಕ ಕಡಿತದಿಂದ ಮುಕ್ತಿ ಸಿಕ್ಕಿದೆ.

ಜಿಲ್ಲೆಯ ನದಿಪಾತ್ರದ ನಿವಾಸಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಜಿಲ್ಲಾಡಳಿತದಿಂದ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago