ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ.
ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ ತ್ರಿವೇಣಿ ಸಂಗಮದಲ್ಲಿ ಹೆಚ್ಚು ನೀರು ಹರಿಯುತ್ತಿದೆ.
ಭಾಗಮಂಡಲ ತಲಕಾವೇರಿಗೆ ಭಕ್ತಾದಿಗಳ ಸಂಖ್ಯೆ ಇಂದು ಬೆಳಿಗ್ಗೆ ಕ್ಷಿಣಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಅಭಿವೃದ್ಧಿಪಡಿಸಲಾದ ಉದ್ಯಾನವನ ಸಂಪೂರ್ಣವಾಗಿ ಜಲಾವೃತ ವಾಗಿದೆ.
ನಾಪೋಕ್ಲು- ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ನಿರ್ಮಾಣದಿಂದ ಸಂಪರ್ಕ ಕಡಿತದಿಂದ ಮುಕ್ತಿ ಸಿಕ್ಕಿದೆ.
ಜಿಲ್ಲೆಯ ನದಿಪಾತ್ರದ ನಿವಾಸಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಜಿಲ್ಲಾಡಳಿತದಿಂದ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…