BREAKING NEWS

ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ: ಭರ್ತಿಯಾದ ತ್ರಿವೇಣಿ ಸಂಗಮ!

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ.

ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ ತ್ರಿವೇಣಿ ಸಂಗಮದಲ್ಲಿ ಹೆಚ್ಚು ನೀರು ಹರಿಯುತ್ತಿದೆ.

ಭಾಗಮಂಡಲ ತಲಕಾವೇರಿಗೆ ಭಕ್ತಾದಿಗಳ ಸಂಖ್ಯೆ ಇಂದು ಬೆಳಿಗ್ಗೆ ಕ್ಷಿಣಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಅಭಿವೃದ್ಧಿಪಡಿಸಲಾದ ಉದ್ಯಾನವನ ಸಂಪೂರ್ಣವಾಗಿ ಜಲಾವೃತ ವಾಗಿದೆ.

ನಾಪೋಕ್ಲು- ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ನಿರ್ಮಾಣದಿಂದ ಸಂಪರ್ಕ ಕಡಿತದಿಂದ ಮುಕ್ತಿ ಸಿಕ್ಕಿದೆ.

ಜಿಲ್ಲೆಯ ನದಿಪಾತ್ರದ ನಿವಾಸಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಜಿಲ್ಲಾಡಳಿತದಿಂದ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

2 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

7 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

7 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

7 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

7 hours ago