BREAKING NEWS

ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ: ಭರ್ತಿಯಾದ ತ್ರಿವೇಣಿ ಸಂಗಮ!

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ.

ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ ತ್ರಿವೇಣಿ ಸಂಗಮದಲ್ಲಿ ಹೆಚ್ಚು ನೀರು ಹರಿಯುತ್ತಿದೆ.

ಭಾಗಮಂಡಲ ತಲಕಾವೇರಿಗೆ ಭಕ್ತಾದಿಗಳ ಸಂಖ್ಯೆ ಇಂದು ಬೆಳಿಗ್ಗೆ ಕ್ಷಿಣಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಅಭಿವೃದ್ಧಿಪಡಿಸಲಾದ ಉದ್ಯಾನವನ ಸಂಪೂರ್ಣವಾಗಿ ಜಲಾವೃತ ವಾಗಿದೆ.

ನಾಪೋಕ್ಲು- ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ನಿರ್ಮಾಣದಿಂದ ಸಂಪರ್ಕ ಕಡಿತದಿಂದ ಮುಕ್ತಿ ಸಿಕ್ಕಿದೆ.

ಜಿಲ್ಲೆಯ ನದಿಪಾತ್ರದ ನಿವಾಸಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಜಿಲ್ಲಾಡಳಿತದಿಂದ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

48 mins ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

54 mins ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

58 mins ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

1 hour ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

1 hour ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

15 hours ago