ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಉತ್ತರ ಪ್ರದೇಶದ ಮೀರಠ್ನ ಚೌಹಾನ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್, ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಂಭವಿಸಿದ ದುರಂತದಲ್ಲಿ ಐದು ಮಂದಿ ಸುಟ್ಟು ಕರಕಲಾಗಿದ್ದಾರೆ.
ಹದಿನಾರು ಮಂದಿ ಯಾತ್ರಿಕರ ಗುಂಪು ಹರಿದ್ವಾರದಿಂದ ತಮ್ಮ ಸ್ವಗ್ರಾಮ ರಾಲಿ ಚೌಹಾಣ್ ಗೆ ವಾಪಸ್ಸಾಗುತ್ತಿದ್ದಾಗ ಭವಾನ್ಪುರ ಬಳಿ ಈ ದುರಂತ ಸಂಭವಿಸಿದೆ. “ಹತ್ತು ಮಂದಿ ಕನ್ವಾರಿಯಾಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಐದು ಮಂದಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಮೀರಠ್ ಜಿಲ್ಲಾಧಿಕಾರಿ ಡಿ.ಎಂ.ದೀಪಕ್ ಮೀನಾ ಹೇಳಿದ್ದಾರೆ.
ಯಾತ್ರಿಗಳ ವಾಹನದಲ್ಲಿ ಬೃಹತ್ ಸ್ಪೀಕರ್ಗಳ ಮೂಲಕ ಹಾಡು ಕೇಳುತ್ತಾ ಹಳ್ಳಿಯನ್ನು ಪ್ರವೇಶಿಸಿದಾಗ ವಾಹನಕ್ಕೆ ಅಚಾನಕ್ಕಾಗಿ ತೂಗಾಡುವ ಹೈ-ಟೆನ್ಷನ್ ವೈರ್ ತಗುಲಿದೆ. ಈ ವೇಳೆ ನೋಡನೋಡುತ್ತಲೇ ಒಬ್ಬರ ನಂತರ ಒಬ್ಬರು ಯಾತ್ರಿಕರು ವಿದ್ಯುತ್ ಸ್ಪರ್ಶದಿಂದ ಕುಸಿದು ಬಿದ್ದಿದ್ದಾರೆ. ಗ್ರಾಮಸ್ಥರು ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ವಿದ್ಯುತ್ ಕೇಂದ್ರಕ್ಕೆ ಕರೆ ಮಾಡಿದ್ದಾರೆಯಾದರೂ ಅವರು ಬಂದು ವಿದ್ಯುತ್ ಕಡಿತ ಮಾಡುವಷ್ಟರಲ್ಲಿಯೇ ಯಾತ್ರಿಕರು ವಿದ್ಯುದಾಘಾತಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಐದು ಮಂದಿ ಸಾವನ್ನಪ್ಪಿದ್ದಾರೆ.
ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…
ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…
ಮಹಾದೇಶ್ ಎಂ ಗೌಡ ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…
ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…
ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…
ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…