ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಉತ್ತರ ಪ್ರದೇಶದ ಮೀರಠ್ನ ಚೌಹಾನ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್, ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಂಭವಿಸಿದ ದುರಂತದಲ್ಲಿ ಐದು ಮಂದಿ ಸುಟ್ಟು ಕರಕಲಾಗಿದ್ದಾರೆ.
ಹದಿನಾರು ಮಂದಿ ಯಾತ್ರಿಕರ ಗುಂಪು ಹರಿದ್ವಾರದಿಂದ ತಮ್ಮ ಸ್ವಗ್ರಾಮ ರಾಲಿ ಚೌಹಾಣ್ ಗೆ ವಾಪಸ್ಸಾಗುತ್ತಿದ್ದಾಗ ಭವಾನ್ಪುರ ಬಳಿ ಈ ದುರಂತ ಸಂಭವಿಸಿದೆ. “ಹತ್ತು ಮಂದಿ ಕನ್ವಾರಿಯಾಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಐದು ಮಂದಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಮೀರಠ್ ಜಿಲ್ಲಾಧಿಕಾರಿ ಡಿ.ಎಂ.ದೀಪಕ್ ಮೀನಾ ಹೇಳಿದ್ದಾರೆ.
ಯಾತ್ರಿಗಳ ವಾಹನದಲ್ಲಿ ಬೃಹತ್ ಸ್ಪೀಕರ್ಗಳ ಮೂಲಕ ಹಾಡು ಕೇಳುತ್ತಾ ಹಳ್ಳಿಯನ್ನು ಪ್ರವೇಶಿಸಿದಾಗ ವಾಹನಕ್ಕೆ ಅಚಾನಕ್ಕಾಗಿ ತೂಗಾಡುವ ಹೈ-ಟೆನ್ಷನ್ ವೈರ್ ತಗುಲಿದೆ. ಈ ವೇಳೆ ನೋಡನೋಡುತ್ತಲೇ ಒಬ್ಬರ ನಂತರ ಒಬ್ಬರು ಯಾತ್ರಿಕರು ವಿದ್ಯುತ್ ಸ್ಪರ್ಶದಿಂದ ಕುಸಿದು ಬಿದ್ದಿದ್ದಾರೆ. ಗ್ರಾಮಸ್ಥರು ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ವಿದ್ಯುತ್ ಕೇಂದ್ರಕ್ಕೆ ಕರೆ ಮಾಡಿದ್ದಾರೆಯಾದರೂ ಅವರು ಬಂದು ವಿದ್ಯುತ್ ಕಡಿತ ಮಾಡುವಷ್ಟರಲ್ಲಿಯೇ ಯಾತ್ರಿಕರು ವಿದ್ಯುದಾಘಾತಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಐದು ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…