BREAKING NEWS

ಟ್ರಕ್‌ಗೆ ವಿದ್ಯುತ್ ಸ್ಪರ್ಶ : ಐವರು ಸಜೀವ ದಹನ

ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್‌ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಉತ್ತರ ಪ್ರದೇಶದ ಮೀರಠ್‌ನ ಚೌಹಾನ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್, ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಂಭವಿಸಿದ ದುರಂತದಲ್ಲಿ ಐದು ಮಂದಿ ಸುಟ್ಟು ಕರಕಲಾಗಿದ್ದಾರೆ.

ಹದಿನಾರು ಮಂದಿ ಯಾತ್ರಿಕರ ಗುಂಪು ಹರಿದ್ವಾರದಿಂದ ತಮ್ಮ ಸ್ವಗ್ರಾಮ ರಾಲಿ ಚೌಹಾಣ್ ಗೆ ವಾಪಸ್ಸಾಗುತ್ತಿದ್ದಾಗ ಭವಾನ್ಪುರ ಬಳಿ ಈ ದುರಂತ ಸಂಭವಿಸಿದೆ. “ಹತ್ತು ಮಂದಿ ಕನ್ವಾರಿಯಾಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಐದು ಮಂದಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಮೀರಠ್ ಜಿಲ್ಲಾಧಿಕಾರಿ ಡಿ.ಎಂ.ದೀಪಕ್ ಮೀನಾ ಹೇಳಿದ್ದಾರೆ.

ಯಾತ್ರಿಗಳ ವಾಹನದಲ್ಲಿ ಬೃಹತ್ ಸ್ಪೀಕರ್‌ಗಳ ಮೂಲಕ ಹಾಡು ಕೇಳುತ್ತಾ ಹಳ್ಳಿಯನ್ನು ಪ್ರವೇಶಿಸಿದಾಗ ವಾಹನಕ್ಕೆ ಅಚಾನಕ್ಕಾಗಿ ತೂಗಾಡುವ ಹೈ-ಟೆನ್ಷನ್ ವೈರ್ ತಗುಲಿದೆ. ಈ ವೇಳೆ ನೋಡನೋಡುತ್ತಲೇ ಒಬ್ಬರ ನಂತರ ಒಬ್ಬರು ಯಾತ್ರಿಕರು ವಿದ್ಯುತ್ ಸ್ಪರ್ಶದಿಂದ ಕುಸಿದು ಬಿದ್ದಿದ್ದಾರೆ. ಗ್ರಾಮಸ್ಥರು ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ವಿದ್ಯುತ್ ಕೇಂದ್ರಕ್ಕೆ ಕರೆ ಮಾಡಿದ್ದಾರೆಯಾದರೂ ಅವರು ಬಂದು ವಿದ್ಯುತ್ ಕಡಿತ ಮಾಡುವಷ್ಟರಲ್ಲಿಯೇ ಯಾತ್ರಿಕರು ವಿದ್ಯುದಾಘಾತಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಐದು ಮಂದಿ ಸಾವನ್ನಪ್ಪಿದ್ದಾರೆ.

lokesh

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

1 hour ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

2 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

2 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

2 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

2 hours ago