ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಉತ್ತರ ಪ್ರದೇಶದ ಮೀರಠ್ನ ಚೌಹಾನ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್, ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಂಭವಿಸಿದ ದುರಂತದಲ್ಲಿ ಐದು ಮಂದಿ ಸುಟ್ಟು ಕರಕಲಾಗಿದ್ದಾರೆ.
ಹದಿನಾರು ಮಂದಿ ಯಾತ್ರಿಕರ ಗುಂಪು ಹರಿದ್ವಾರದಿಂದ ತಮ್ಮ ಸ್ವಗ್ರಾಮ ರಾಲಿ ಚೌಹಾಣ್ ಗೆ ವಾಪಸ್ಸಾಗುತ್ತಿದ್ದಾಗ ಭವಾನ್ಪುರ ಬಳಿ ಈ ದುರಂತ ಸಂಭವಿಸಿದೆ. “ಹತ್ತು ಮಂದಿ ಕನ್ವಾರಿಯಾಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಐದು ಮಂದಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಮೀರಠ್ ಜಿಲ್ಲಾಧಿಕಾರಿ ಡಿ.ಎಂ.ದೀಪಕ್ ಮೀನಾ ಹೇಳಿದ್ದಾರೆ.
ಯಾತ್ರಿಗಳ ವಾಹನದಲ್ಲಿ ಬೃಹತ್ ಸ್ಪೀಕರ್ಗಳ ಮೂಲಕ ಹಾಡು ಕೇಳುತ್ತಾ ಹಳ್ಳಿಯನ್ನು ಪ್ರವೇಶಿಸಿದಾಗ ವಾಹನಕ್ಕೆ ಅಚಾನಕ್ಕಾಗಿ ತೂಗಾಡುವ ಹೈ-ಟೆನ್ಷನ್ ವೈರ್ ತಗುಲಿದೆ. ಈ ವೇಳೆ ನೋಡನೋಡುತ್ತಲೇ ಒಬ್ಬರ ನಂತರ ಒಬ್ಬರು ಯಾತ್ರಿಕರು ವಿದ್ಯುತ್ ಸ್ಪರ್ಶದಿಂದ ಕುಸಿದು ಬಿದ್ದಿದ್ದಾರೆ. ಗ್ರಾಮಸ್ಥರು ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ವಿದ್ಯುತ್ ಕೇಂದ್ರಕ್ಕೆ ಕರೆ ಮಾಡಿದ್ದಾರೆಯಾದರೂ ಅವರು ಬಂದು ವಿದ್ಯುತ್ ಕಡಿತ ಮಾಡುವಷ್ಟರಲ್ಲಿಯೇ ಯಾತ್ರಿಕರು ವಿದ್ಯುದಾಘಾತಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಐದು ಮಂದಿ ಸಾವನ್ನಪ್ಪಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…