ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಉತ್ತರ ಪ್ರದೇಶದ ಮೀರಠ್ನ ಚೌಹಾನ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್, ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಂಭವಿಸಿದ ದುರಂತದಲ್ಲಿ ಐದು ಮಂದಿ ಸುಟ್ಟು ಕರಕಲಾಗಿದ್ದಾರೆ.
ಹದಿನಾರು ಮಂದಿ ಯಾತ್ರಿಕರ ಗುಂಪು ಹರಿದ್ವಾರದಿಂದ ತಮ್ಮ ಸ್ವಗ್ರಾಮ ರಾಲಿ ಚೌಹಾಣ್ ಗೆ ವಾಪಸ್ಸಾಗುತ್ತಿದ್ದಾಗ ಭವಾನ್ಪುರ ಬಳಿ ಈ ದುರಂತ ಸಂಭವಿಸಿದೆ. “ಹತ್ತು ಮಂದಿ ಕನ್ವಾರಿಯಾಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಐದು ಮಂದಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಮೀರಠ್ ಜಿಲ್ಲಾಧಿಕಾರಿ ಡಿ.ಎಂ.ದೀಪಕ್ ಮೀನಾ ಹೇಳಿದ್ದಾರೆ.
ಯಾತ್ರಿಗಳ ವಾಹನದಲ್ಲಿ ಬೃಹತ್ ಸ್ಪೀಕರ್ಗಳ ಮೂಲಕ ಹಾಡು ಕೇಳುತ್ತಾ ಹಳ್ಳಿಯನ್ನು ಪ್ರವೇಶಿಸಿದಾಗ ವಾಹನಕ್ಕೆ ಅಚಾನಕ್ಕಾಗಿ ತೂಗಾಡುವ ಹೈ-ಟೆನ್ಷನ್ ವೈರ್ ತಗುಲಿದೆ. ಈ ವೇಳೆ ನೋಡನೋಡುತ್ತಲೇ ಒಬ್ಬರ ನಂತರ ಒಬ್ಬರು ಯಾತ್ರಿಕರು ವಿದ್ಯುತ್ ಸ್ಪರ್ಶದಿಂದ ಕುಸಿದು ಬಿದ್ದಿದ್ದಾರೆ. ಗ್ರಾಮಸ್ಥರು ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ವಿದ್ಯುತ್ ಕೇಂದ್ರಕ್ಕೆ ಕರೆ ಮಾಡಿದ್ದಾರೆಯಾದರೂ ಅವರು ಬಂದು ವಿದ್ಯುತ್ ಕಡಿತ ಮಾಡುವಷ್ಟರಲ್ಲಿಯೇ ಯಾತ್ರಿಕರು ವಿದ್ಯುದಾಘಾತಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಐದು ಮಂದಿ ಸಾವನ್ನಪ್ಪಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…