BREAKING NEWS

ಟ್ರಕ್‌ಗೆ ವಿದ್ಯುತ್ ಸ್ಪರ್ಶ : ಐವರು ಸಜೀವ ದಹನ

ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್‌ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಉತ್ತರ ಪ್ರದೇಶದ ಮೀರಠ್‌ನ ಚೌಹಾನ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್, ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಂಭವಿಸಿದ ದುರಂತದಲ್ಲಿ ಐದು ಮಂದಿ ಸುಟ್ಟು ಕರಕಲಾಗಿದ್ದಾರೆ.

ಹದಿನಾರು ಮಂದಿ ಯಾತ್ರಿಕರ ಗುಂಪು ಹರಿದ್ವಾರದಿಂದ ತಮ್ಮ ಸ್ವಗ್ರಾಮ ರಾಲಿ ಚೌಹಾಣ್ ಗೆ ವಾಪಸ್ಸಾಗುತ್ತಿದ್ದಾಗ ಭವಾನ್ಪುರ ಬಳಿ ಈ ದುರಂತ ಸಂಭವಿಸಿದೆ. “ಹತ್ತು ಮಂದಿ ಕನ್ವಾರಿಯಾಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಐದು ಮಂದಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಮೀರಠ್ ಜಿಲ್ಲಾಧಿಕಾರಿ ಡಿ.ಎಂ.ದೀಪಕ್ ಮೀನಾ ಹೇಳಿದ್ದಾರೆ.

ಯಾತ್ರಿಗಳ ವಾಹನದಲ್ಲಿ ಬೃಹತ್ ಸ್ಪೀಕರ್‌ಗಳ ಮೂಲಕ ಹಾಡು ಕೇಳುತ್ತಾ ಹಳ್ಳಿಯನ್ನು ಪ್ರವೇಶಿಸಿದಾಗ ವಾಹನಕ್ಕೆ ಅಚಾನಕ್ಕಾಗಿ ತೂಗಾಡುವ ಹೈ-ಟೆನ್ಷನ್ ವೈರ್ ತಗುಲಿದೆ. ಈ ವೇಳೆ ನೋಡನೋಡುತ್ತಲೇ ಒಬ್ಬರ ನಂತರ ಒಬ್ಬರು ಯಾತ್ರಿಕರು ವಿದ್ಯುತ್ ಸ್ಪರ್ಶದಿಂದ ಕುಸಿದು ಬಿದ್ದಿದ್ದಾರೆ. ಗ್ರಾಮಸ್ಥರು ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ವಿದ್ಯುತ್ ಕೇಂದ್ರಕ್ಕೆ ಕರೆ ಮಾಡಿದ್ದಾರೆಯಾದರೂ ಅವರು ಬಂದು ವಿದ್ಯುತ್ ಕಡಿತ ಮಾಡುವಷ್ಟರಲ್ಲಿಯೇ ಯಾತ್ರಿಕರು ವಿದ್ಯುದಾಘಾತಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಐದು ಮಂದಿ ಸಾವನ್ನಪ್ಪಿದ್ದಾರೆ.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago