BREAKING NEWS

ತಾವು ರಾಜಕೀಯವಾಗಿ ಬದುಕಿದ್ದೇವೆಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ: ಡಿಕೆಶಿ

ಬೆಂಗಳೂರು : “ಪಕ್ಷದ ಮತ ಪ್ರಮಾಣ ಹೆಚ್ಚಿಸಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ‌ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಸಂದೇಶ ನೀಡಿದ್ದಾರೆ. ಅವರು ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ʼʼಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಸೇರ್ಪಡೆ ಮಾಡಿಕೊಳ್ಳಲು ಕಾರ್ಯಕರ್ತರಿಗೆ ತಿಳಿಸಿದ್ದೇನೆ. ಉಳಿದಂತೆ ಯಾರದೇ ಪಕ್ಷ ಸೇರ್ಪಡೆ ವಿಚಾರ ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನೀವು ಬೇರೆ ಪಕ್ಷದ ಶಾಸಕರ ಜೊತೆ ಖುದ್ದಾಗಿ ಮಾತನಾಡಿದ್ದೀರಿ ಎಂಬ ಮಾತಿದೆಯಲ್ಲ ಎಂದು ಕೇಳಿದಾಗ, “ನಿಮ್ಮ ಮಾಹಿತಿ ಸಂಪೂರ್ಣ ಸುಳ್ಳು. ಬಿಜೆಪಿಯವರು ಯಾರ ಜೊತೆ ಮಾತನಾಡಿದ್ದಾರೆ ಎಂಬುದರ ಬಗ್ಗೆ ನೀವು ಚರ್ಚೆ ಮಾಡುತ್ತಿಲ್ಲ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ಅವರು ಭಾವಿಸಿದ್ದಾರೆ. ಅವರು ಕಲಿಸಿ ಕೊಟ್ಟಿರುವ ಪಾಠ ನಮಗೆ ನೆನಪಿದೆ.

ಜನ ನಮಗೆ 135 ಸಂಖ್ಯಾಬಲ ನೀಡಿದ್ದಾರೆ. ನಾವು ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಬಿಜೆಪಿ ಹಾಗೂ ದಳದವರಿಗೆ ನೆಮ್ಮದಿ ಇಲ್ಲ. ಅದಕ್ಕೆ ಅವರೇ ಔಷಧಿ ಕಂಡುಕೊಳ್ಳಬೇಕು. ಗೆದ್ದಿರುವವರು, ಸೋತಿರುವವರು ಮಾತನಾಡುತ್ತಿದ್ದಾರೆ. ಯಾರು ಏನು ಮಾತನಾಡುತ್ತಿದ್ದಾರೆ ಎಂದು ನಾವು ಗಮನಿಸುತ್ತಿದ್ದೇವೆ. ನಾವು ಯಾರ ಮಾತಿಗೂ ಬೀಗ ಹಾಕುವುದಿಲ್ಲ” ಎಂದು ತಿಳಿಸಿದರು.

ಬಿಜೆಪಿ ನಾಯಕರು ಸರ್ಕಾರ ಬೀಳಿಸುವ ಪ್ರಯತ್ನ ಮಾಡುತ್ತಿದ್ದಾರೆಯೇ ಎಂದು ಕೇಳಿದಾಗ, “ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ಸಾಬೀತುಪಡಿಸಲು ಅವರು ಪ್ರಯತ್ನಿಸುತ್ತಿದ್ದಾರೆ” ಎಂದು ತಿಳಿಸಿದರು.

ಜೆಡಿಎಸ್ ನ 13 ಶಾಸಕರು ನಿಮ್ಮ ಸಂಪರ್ಕದಲ್ಲಿದ್ದು, ಮುಂದೆ ಅವರು ನಿಮಗೆ ಬೆಂಬಲ ನೀಡಲಿದ್ದಾರೆ ಎಂಬ ಮಾಹಿತಿ ಇದೆಯಲ್ಲ ಎಂಬ ಪ್ರಶ್ನೆಗೆ, “ಈ ವಿಚಾರ ನನಗೆ ಗೊತ್ತಿಲ್ಲ. ನಿಮ್ಮಿಂದಲೇ ಈಗ ಮಾಹಿತಿ ಕೇಳುತ್ತಿದ್ದೇನೆ. ನನಗೆ 224 ಶಾಸಕರು ಪರಿಚಯಸ್ಥರು. ಎಲ್ಲರ ಜತೆ ರಾಜಕೀಯವಾಗಿ ಅಲ್ಲದಿದ್ದರೂ ವೈಯಕ್ತಿಕ ಸಂಬಂಧ ಇದೆ. ಅವರ ಹೆಸರಿಗೆ ನಾವು ಧಕ್ಕೆ ಯಾಕೆ ತರೋಣ?” ಎಂದು ತಿಳಿಸಿದರು.

ಪಕ್ಷ ಬಿಟ್ಟು ಹೋದವರು ಬಂದರೆ ಪಕ್ಷದ ಬಾಗಿಲು ತೆರೆದಿರುತ್ತದೆಯೇ ಎಂದು ಕೇಳಿದಾಗ, “ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು” ಎಂದು ತಿಳಿಸಿದರು.

40% ಕಮಿಷನ್ ವಿಚಾರ ತನಿಖೆಗೆ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚನೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಾನು ಏನನ್ನೂ ಹೇಳುವುದಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಉತ್ತರ ನೀಡಲಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ತನಿಖೆಗೆ ಸಮಿತಿ ರಚನೆ ಮಾಡಿದ್ದು, ಅವರು ತನಿಖೆ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

2 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

10 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

20 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago