ಬಳ್ಳಾರಿ : ತಿರುಪತಿಯಲ್ಲಿ ಪ್ರಸಾದದ ರೂಪದಲ್ಲಿ ವಿತರಿಸುತ್ತಿದ್ದ ಪ್ರಸಿದ್ಧ ಲಾಡುಗಳಲ್ಲಿ ಇನ್ನುಮುಂದೆ ನಂದಿನಿ ತುಪ್ಪದ ಘಮ ಸಿಗುವುದಿಲ್ಲ. ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಕೆಎಂಎಫ್ನಿಂದ ನಂದಿನಿ ತುಪ್ಪದ ಖರೀದಿಯನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಲಾಡುಗಳ ತಯಾರಿಕೆಯಲ್ಲಿ ನಂದಿನಿ ತುಪ್ಪದ ಬಳಕೆಯನ್ನು ನಿಲ್ಲಿಸಿದೆ.
ಈ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಭೀಮಾನಾಯ್ಕ್, ಕೆಎಂಎಫ್ ಸಲ್ಲಿಸಿರುವ ತುಪ್ಪದ ದರ ಪ್ರಸ್ತಾವನೆಯನ್ನು ಟಿಟಿಡಿ ಒಪ್ಪಿಕೊಂಡಿಲ್ಲ. ಅದರ ಬದಲಾಗಿ ಬೇರೆ ಕಂಪನಿಯಿಂದ ತುಪ್ಪ ಖರೀದಿಸಲು ಟಿಟಿಡಿ ಮುಂದಾಗಿದೆ ಎಂದಿದ್ದಾರೆ. ನಂದಿನಿ ತುಪ್ಪದಿಂದ ತಿರುಪತಿ ದೇವಸ್ಥಾನದಲ್ಲಿನ ಲಾಡುಗಳು ರುಚಿಯಾಗಿವೆ ಎಂದು ಟಿಟಿಡಿ ಹಲವು ಬಾರಿ ಹೇಳಿತ್ತು. ಹೀಗಿದ್ದರೂ ಸಹ ಕೆಎಂಎಫ್ ಮತ್ತು ಟಿಟಿಡಿ ನಡುವಿನ ತುಪ್ಪದ ಒಪ್ಪಂದಕ್ಕೆ ಅಂತ್ಯ ಬಿದ್ದಿದೆ.
ಆಗಸ್ಟ್ 1 ರಿಂದ ಹಾಲಿನ ಬೆಲೆ ಹೆಚ್ಚಾಗಿರುವುದರಿಂದ ಸಹಜವಾಗಿಯೇ ತುಪ್ಪಕ್ಕೆ ಹೆಚ್ಚಿನ ಬೆಲೆ ನೀಡುವಂತೆ ಬೇಡಿಕೆ ಇಟ್ಟಿದ್ದೇವು. ಆದರೆ, ಟಿಟಿಡಿ ತುಪ್ಪ ಪೂರೈಸಲು ಇ-ಪ್ರೊಕ್ಯೂರ್ಮೆಂಟ್ ಸೈಟ್ ಮೂಲಕ ಕಡಿಮೆ ಬೆಲೆಯನ್ನು ನಮೂದಿಸಿದ ಕಂಪನಿಯನ್ನು ಆಯ್ಕೆ ಮಾಡಿದೆ. ಗುಣಮಟ್ಟದ ಕಾರಣದಿಂದ ನಂದಿನಿ ತುಪ್ಪ ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಹೊಂದಿದೆ. ಕಡಿಮೆ ಬೆಲೆಯಲ್ಲಿ ಬಿಡ್ ಮಾಡುವ ಕಂಪನಿ ತುಪ್ಪದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದು ಸ್ಪಷ್ಟ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.
ಅದಲ್ಲದೇ, ರುಚಿ ರುಚಿಯಾದ ಲಾಡು ತಯಾರಿಕೆಯಲ್ಲಿ ನಂದಿನಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…