ಬಳ್ಳಾರಿ : ತಿರುಪತಿಯಲ್ಲಿ ಪ್ರಸಾದದ ರೂಪದಲ್ಲಿ ವಿತರಿಸುತ್ತಿದ್ದ ಪ್ರಸಿದ್ಧ ಲಾಡುಗಳಲ್ಲಿ ಇನ್ನುಮುಂದೆ ನಂದಿನಿ ತುಪ್ಪದ ಘಮ ಸಿಗುವುದಿಲ್ಲ. ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಕೆಎಂಎಫ್ನಿಂದ ನಂದಿನಿ ತುಪ್ಪದ ಖರೀದಿಯನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಲಾಡುಗಳ ತಯಾರಿಕೆಯಲ್ಲಿ ನಂದಿನಿ ತುಪ್ಪದ ಬಳಕೆಯನ್ನು ನಿಲ್ಲಿಸಿದೆ.
ಈ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಭೀಮಾನಾಯ್ಕ್, ಕೆಎಂಎಫ್ ಸಲ್ಲಿಸಿರುವ ತುಪ್ಪದ ದರ ಪ್ರಸ್ತಾವನೆಯನ್ನು ಟಿಟಿಡಿ ಒಪ್ಪಿಕೊಂಡಿಲ್ಲ. ಅದರ ಬದಲಾಗಿ ಬೇರೆ ಕಂಪನಿಯಿಂದ ತುಪ್ಪ ಖರೀದಿಸಲು ಟಿಟಿಡಿ ಮುಂದಾಗಿದೆ ಎಂದಿದ್ದಾರೆ. ನಂದಿನಿ ತುಪ್ಪದಿಂದ ತಿರುಪತಿ ದೇವಸ್ಥಾನದಲ್ಲಿನ ಲಾಡುಗಳು ರುಚಿಯಾಗಿವೆ ಎಂದು ಟಿಟಿಡಿ ಹಲವು ಬಾರಿ ಹೇಳಿತ್ತು. ಹೀಗಿದ್ದರೂ ಸಹ ಕೆಎಂಎಫ್ ಮತ್ತು ಟಿಟಿಡಿ ನಡುವಿನ ತುಪ್ಪದ ಒಪ್ಪಂದಕ್ಕೆ ಅಂತ್ಯ ಬಿದ್ದಿದೆ.
ಆಗಸ್ಟ್ 1 ರಿಂದ ಹಾಲಿನ ಬೆಲೆ ಹೆಚ್ಚಾಗಿರುವುದರಿಂದ ಸಹಜವಾಗಿಯೇ ತುಪ್ಪಕ್ಕೆ ಹೆಚ್ಚಿನ ಬೆಲೆ ನೀಡುವಂತೆ ಬೇಡಿಕೆ ಇಟ್ಟಿದ್ದೇವು. ಆದರೆ, ಟಿಟಿಡಿ ತುಪ್ಪ ಪೂರೈಸಲು ಇ-ಪ್ರೊಕ್ಯೂರ್ಮೆಂಟ್ ಸೈಟ್ ಮೂಲಕ ಕಡಿಮೆ ಬೆಲೆಯನ್ನು ನಮೂದಿಸಿದ ಕಂಪನಿಯನ್ನು ಆಯ್ಕೆ ಮಾಡಿದೆ. ಗುಣಮಟ್ಟದ ಕಾರಣದಿಂದ ನಂದಿನಿ ತುಪ್ಪ ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಹೊಂದಿದೆ. ಕಡಿಮೆ ಬೆಲೆಯಲ್ಲಿ ಬಿಡ್ ಮಾಡುವ ಕಂಪನಿ ತುಪ್ಪದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದು ಸ್ಪಷ್ಟ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.
ಅದಲ್ಲದೇ, ರುಚಿ ರುಚಿಯಾದ ಲಾಡು ತಯಾರಿಕೆಯಲ್ಲಿ ನಂದಿನಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…