ತುಮಕೂರು: ಗುಬ್ಬಿ ತಾಲೂಕಿನ ಇಸ್ಲಾಂಪುರ ಗ್ರಾಮದ ಬಳಿ ಹೇಮಾವತಿ ನಾಲೆಗೆ ಬಿದ್ದು ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ.
ಮೃತರನ್ನು 9 ವರ್ಷದ ಮಿಸ್ಬಾ ಬಾನು ಮತ್ತು 7 ವರ್ಷದ ಮಹಮ್ಮದ್ ನಯೀಮ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಬಾಲಕ 10 ವರ್ಷದ ಮಹ್ಮದ್ ಬಿಲಾಲ್ ನನ್ನು ರಕ್ಷಿಸಲಾಗಿದೆ.
ಈ ಮೂವರು ಮಕ್ಕಳು ನಾಲೆಗೆ ಬಿದ್ದಿದ್ದರು. ಇದನ್ನು ಗಮನಿಸಿದ ಯುವಕನೊಬ್ಬ ಕೂಡಲೇ ನಾಲೆಗೆ ಹಾರಿ ಮಹ್ಮದ್ ಬಿಲಾಲ್ನನ್ನು ರಕ್ಷಣೆ ಮಾಡಿದ್ದಾನೆ. ಆದರೆ ಮತ್ತಿಬ್ಬರು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು.
ನಾಲೆಯಲ್ಲಿ ಕೊಚ್ಚಿ ಹೋಗಿರುವ ಮಿಸ್ಬಾ ಬಾನು ಮತ್ತು ಮಹಮ್ಮದ್ ನಯೀಮ್ ಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…