BREAKING NEWS

ಖ್ಯಾತನಾಮರ ಖಾತೆಗಳ ‘ಬ್ಲೂ ಟಿಕ್‌’ ಹಿಂಪಡೆಯಲಾರಂಭಿಸಿದ ಟ್ವಿಟರ್‌

ಲಾಸ್‌ ಏಂಜಲೀಸ್‌: ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಅಧಿಕೃತ ಟ್ವಿಟರ್ ಖಾತೆಗಳಿಂದ ‘ಬ್ಲೂ ಟಿಕ್‌’ ಗುರುತನ್ನು ತೆಗೆದುಹಾಕುವ ಕಾರ್ಯವನ್ನು ಟ್ವಿಟರ್ ಗುರುವಾರದಿಂದ ಆರಂಭಿಸಿದೆ.

ಹಲವು ಮಾನದಂಡಗಳನ್ನು ಅನುಸರಿಸಿ, ಅಧಿಕೃತವಾದ ಮತ್ತು ಪರಿಶೀಲನೆಗೆ (ವೆರಿಫೈಡ್‌) ಒಳಪಟ್ಟ ಟ್ವಿಟರ್‌ ಖಾತೆಗಳಿಗೆ ಮಾತ್ರ ಈ ಹಿಂದೆ ಬ್ಲೂಟಿಕ್‌ ನೀಡಲಾಗುತ್ತಿತ್ತು. ರಾಜಕಾರಣಿಗಳು, ಸಿನಿಮಾ ನಟರು, ಸಾಮಾಜಿಕ ರಂಗದಲ್ಲಿರುವವರು, ಪ್ರತಿಷ್ಠಿತ ಸಂಸ್ಥೆಗಳು…. ಒಟ್ಟಾರೆಯಾಗಿ ಖ್ಯಾತನಾಮರು ಈ ವ್ಯವಸ್ಥೆಯಲ್ಲಿ ಹಲವು ವರ್ಷಗಳಿಂದ ಉಚಿತವಾಗಿ ‘ಬ್ಲೂ ಟಿಕ್’ ಹೊಂದಿದ್ದರು.

ಈ ಮಧ್ಯೆ, ಟೆಸ್ಲಾದ ಸಿಇಒ, ವಿಶ್ವದ ಶ್ರೀಮಂತ ಉದ್ಯಮಿ ಇಲಾನ್‌ ಮಸ್ಕ್‌ 2022ರ ಅಕ್ಟೋಬರ್‌ನಲ್ಲಿ ಟ್ವಿಟರ್ ಅನ್ನು 44 ಶತಕೋಟಿ ಡಾಲರ್‌ಗೆ (₹3.61 ಲಕ್ಷ ಕೋಟಿ) ಖರೀದಿಸಿದ್ದರು.

ಬ್ಲೂಟಿಕ್‌ ಹೊಂದಿರುವ ಖಾತೆದಾರರು ತಮ್ಮ ‘ವೆರಿಫೈಡ್‌’ ಸ್ಥಾನಮಾನ ಉಳಿಸಿಕೊಳ್ಳಬೇಕಿದ್ದರೆ ತಿಂಗಳಿಗೆ 8 ಡಾಲರ್‌ (₹657.24) ನೀಡಬೇಕಾಗುತ್ತದೆ ಎಂದು ಮಸ್ಕ್‌ ಹೇಳಿದ್ದರು. ಇಲ್ಲವಾದರೆ ಬ್ಲೂಟಿಕ್‌ ಗುರುತುಗಳನ್ನು ಕಳೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದ್ದರು.

ಖಾತೆದಾರರು ಬ್ಲೂ ಟಿಕ್‌ ಉಳಿಸಿಕೊಳ್ಳಬೇಕಾದರೆ ಮಾಸಿಕ 20 ಡಾಲರ್‌ ಶುಲ್ಕ ಪಾವತಿಸಬೇಕು ಎಂದು ಮಸ್ಕ್‌ ಆರಂಭದಲ್ಲಿ ಹೇಳಿದ್ದರಾದರೂ, ತೀವ್ರ ವಿರೋಧಗಳ ಹಿನ್ನೆಲೆಯಲ್ಲಿ ಶುಲ್ಕ ತಗ್ಗಿಸಿದ್ದರು. ಪಾವತಿ ಮಾಡದವರ ‘ಬ್ಲೂ ಟಿಕ್‌’ಗಳನ್ನು ಏಪ್ರಿಲ್ ಆರಂಭದಿಂದಲೇ ತೆಗೆಯಲಾಗುವುದು ಎಂದು ಮಸ್ಕ್‌ ಹೇಳಿದ್ದರು. ಅದರಂತೆ ಕೆಲವರ ‘ಬ್ಲೂ ಟಿಕ್‌’ಗಳು ಕಣ್ಮರೆಗೊಂಡಿದ್ದವು. ಆದರೆ, ಗುರುವಾರ ಈ ಪ್ರಕ್ರಿಯೆ ಸಾಮೂಹಿಕವಾಗಿ ನಡೆದಿದೆ.

‘ನಾವು ‘ಬ್ಲೂ ಟಿಕ್‌’ ವೆರಿಪೈಡ್‌ ಗುರುತುಗಳನ್ನು ತೆಗೆದುಹಾಕುತ್ತಿದ್ದೇವೆ. ಟ್ವಿಟರ್‌ನಲ್ಲಿ ವೆರಿಫೈಡ್‌ ಖಾತೆಗಳನ್ನು ಉಳಿಸಿಕೊಳ್ಳಲು ‘ಟ್ವಿಟರ್‌ ಬ್ಲೂ’ಗೆ ಸೈನ್‌ಅಪ್‌ ಆಗಿ’ ಎಂದು ಟ್ವಿಟರ್‌ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಟ್ವಿಟರ್‌ನ ಈ ನಿರ್ಧಾರದ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾತೆಗಳನ್ನು ಇನ್ನು ಮುಂದೆ ದೃಢೀಕರಿಸಲು ಕಷ್ಟವಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ನಕಲಿ ಖಾತೆಗಳು ಹಣ ಪಾವತಿಸಿ ಬ್ಲೂಟಿಕ್‌ ಪಡೆದುಕೊಂಡು ವಂಚಿಸುವ ಸಾಧ್ಯತೆಗಳು ಹೆಚ್ಚಾಗಲಿವೆ ಎಂದು ಆರೋಪಿಸಿದ್ದಾರೆ.

ಟ್ವಿಟರ್ ಅನ್ನು ಸಂಪೂರ್ಣವಾಗಿ ತ್ಯಜಿಸುವುದಾಗಿ ಕೆಲ ಸೆಲೆಬ್ರಿಟಿಗಳು ಹೇಳಿದ್ದರೆ, ಕೆಲ ಮಂದಿ ಈ ಬದಲಾವಣೆಯನ್ನು ಒಪ್ಪಲು ನಿರಾಕರಿಸಿದ್ದಾರೆ. ಹಣ ಪಾವತಿಸುವುದಿಲ್ಲ ಎಂದಿದ್ದಾರೆ.

andolanait

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

12 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

31 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

54 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago