BREAKING NEWS

ಖ್ಯಾತನಾಮರ ಖಾತೆಗಳ ‘ಬ್ಲೂ ಟಿಕ್‌’ ಹಿಂಪಡೆಯಲಾರಂಭಿಸಿದ ಟ್ವಿಟರ್‌

ಲಾಸ್‌ ಏಂಜಲೀಸ್‌: ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಅಧಿಕೃತ ಟ್ವಿಟರ್ ಖಾತೆಗಳಿಂದ ‘ಬ್ಲೂ ಟಿಕ್‌’ ಗುರುತನ್ನು ತೆಗೆದುಹಾಕುವ ಕಾರ್ಯವನ್ನು ಟ್ವಿಟರ್ ಗುರುವಾರದಿಂದ ಆರಂಭಿಸಿದೆ.

ಹಲವು ಮಾನದಂಡಗಳನ್ನು ಅನುಸರಿಸಿ, ಅಧಿಕೃತವಾದ ಮತ್ತು ಪರಿಶೀಲನೆಗೆ (ವೆರಿಫೈಡ್‌) ಒಳಪಟ್ಟ ಟ್ವಿಟರ್‌ ಖಾತೆಗಳಿಗೆ ಮಾತ್ರ ಈ ಹಿಂದೆ ಬ್ಲೂಟಿಕ್‌ ನೀಡಲಾಗುತ್ತಿತ್ತು. ರಾಜಕಾರಣಿಗಳು, ಸಿನಿಮಾ ನಟರು, ಸಾಮಾಜಿಕ ರಂಗದಲ್ಲಿರುವವರು, ಪ್ರತಿಷ್ಠಿತ ಸಂಸ್ಥೆಗಳು…. ಒಟ್ಟಾರೆಯಾಗಿ ಖ್ಯಾತನಾಮರು ಈ ವ್ಯವಸ್ಥೆಯಲ್ಲಿ ಹಲವು ವರ್ಷಗಳಿಂದ ಉಚಿತವಾಗಿ ‘ಬ್ಲೂ ಟಿಕ್’ ಹೊಂದಿದ್ದರು.

ಈ ಮಧ್ಯೆ, ಟೆಸ್ಲಾದ ಸಿಇಒ, ವಿಶ್ವದ ಶ್ರೀಮಂತ ಉದ್ಯಮಿ ಇಲಾನ್‌ ಮಸ್ಕ್‌ 2022ರ ಅಕ್ಟೋಬರ್‌ನಲ್ಲಿ ಟ್ವಿಟರ್ ಅನ್ನು 44 ಶತಕೋಟಿ ಡಾಲರ್‌ಗೆ (₹3.61 ಲಕ್ಷ ಕೋಟಿ) ಖರೀದಿಸಿದ್ದರು.

ಬ್ಲೂಟಿಕ್‌ ಹೊಂದಿರುವ ಖಾತೆದಾರರು ತಮ್ಮ ‘ವೆರಿಫೈಡ್‌’ ಸ್ಥಾನಮಾನ ಉಳಿಸಿಕೊಳ್ಳಬೇಕಿದ್ದರೆ ತಿಂಗಳಿಗೆ 8 ಡಾಲರ್‌ (₹657.24) ನೀಡಬೇಕಾಗುತ್ತದೆ ಎಂದು ಮಸ್ಕ್‌ ಹೇಳಿದ್ದರು. ಇಲ್ಲವಾದರೆ ಬ್ಲೂಟಿಕ್‌ ಗುರುತುಗಳನ್ನು ಕಳೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದ್ದರು.

ಖಾತೆದಾರರು ಬ್ಲೂ ಟಿಕ್‌ ಉಳಿಸಿಕೊಳ್ಳಬೇಕಾದರೆ ಮಾಸಿಕ 20 ಡಾಲರ್‌ ಶುಲ್ಕ ಪಾವತಿಸಬೇಕು ಎಂದು ಮಸ್ಕ್‌ ಆರಂಭದಲ್ಲಿ ಹೇಳಿದ್ದರಾದರೂ, ತೀವ್ರ ವಿರೋಧಗಳ ಹಿನ್ನೆಲೆಯಲ್ಲಿ ಶುಲ್ಕ ತಗ್ಗಿಸಿದ್ದರು. ಪಾವತಿ ಮಾಡದವರ ‘ಬ್ಲೂ ಟಿಕ್‌’ಗಳನ್ನು ಏಪ್ರಿಲ್ ಆರಂಭದಿಂದಲೇ ತೆಗೆಯಲಾಗುವುದು ಎಂದು ಮಸ್ಕ್‌ ಹೇಳಿದ್ದರು. ಅದರಂತೆ ಕೆಲವರ ‘ಬ್ಲೂ ಟಿಕ್‌’ಗಳು ಕಣ್ಮರೆಗೊಂಡಿದ್ದವು. ಆದರೆ, ಗುರುವಾರ ಈ ಪ್ರಕ್ರಿಯೆ ಸಾಮೂಹಿಕವಾಗಿ ನಡೆದಿದೆ.

‘ನಾವು ‘ಬ್ಲೂ ಟಿಕ್‌’ ವೆರಿಪೈಡ್‌ ಗುರುತುಗಳನ್ನು ತೆಗೆದುಹಾಕುತ್ತಿದ್ದೇವೆ. ಟ್ವಿಟರ್‌ನಲ್ಲಿ ವೆರಿಫೈಡ್‌ ಖಾತೆಗಳನ್ನು ಉಳಿಸಿಕೊಳ್ಳಲು ‘ಟ್ವಿಟರ್‌ ಬ್ಲೂ’ಗೆ ಸೈನ್‌ಅಪ್‌ ಆಗಿ’ ಎಂದು ಟ್ವಿಟರ್‌ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಟ್ವಿಟರ್‌ನ ಈ ನಿರ್ಧಾರದ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾತೆಗಳನ್ನು ಇನ್ನು ಮುಂದೆ ದೃಢೀಕರಿಸಲು ಕಷ್ಟವಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ನಕಲಿ ಖಾತೆಗಳು ಹಣ ಪಾವತಿಸಿ ಬ್ಲೂಟಿಕ್‌ ಪಡೆದುಕೊಂಡು ವಂಚಿಸುವ ಸಾಧ್ಯತೆಗಳು ಹೆಚ್ಚಾಗಲಿವೆ ಎಂದು ಆರೋಪಿಸಿದ್ದಾರೆ.

ಟ್ವಿಟರ್ ಅನ್ನು ಸಂಪೂರ್ಣವಾಗಿ ತ್ಯಜಿಸುವುದಾಗಿ ಕೆಲ ಸೆಲೆಬ್ರಿಟಿಗಳು ಹೇಳಿದ್ದರೆ, ಕೆಲ ಮಂದಿ ಈ ಬದಲಾವಣೆಯನ್ನು ಒಪ್ಪಲು ನಿರಾಕರಿಸಿದ್ದಾರೆ. ಹಣ ಪಾವತಿಸುವುದಿಲ್ಲ ಎಂದಿದ್ದಾರೆ.

andolanait

Recent Posts

ಡ್ರಗ್ಸ್‌ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ವೈಫಲ್ಯ ; ಕಮಿಷನರ್ ಸೀಮಾ ಲಾಟ್ಕರ್ ಸಿಬ್ಬಂದಿಗೆ ಬಿಗ್ ಶಾಕ್!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…

53 mins ago

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

1 hour ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

5 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

5 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

5 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

5 hours ago