BREAKING NEWS

ಖ್ಯಾತನಾಮರ ಖಾತೆಗಳ ‘ಬ್ಲೂ ಟಿಕ್‌’ ಹಿಂಪಡೆಯಲಾರಂಭಿಸಿದ ಟ್ವಿಟರ್‌

ಲಾಸ್‌ ಏಂಜಲೀಸ್‌: ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಅಧಿಕೃತ ಟ್ವಿಟರ್ ಖಾತೆಗಳಿಂದ ‘ಬ್ಲೂ ಟಿಕ್‌’ ಗುರುತನ್ನು ತೆಗೆದುಹಾಕುವ ಕಾರ್ಯವನ್ನು ಟ್ವಿಟರ್ ಗುರುವಾರದಿಂದ ಆರಂಭಿಸಿದೆ.

ಹಲವು ಮಾನದಂಡಗಳನ್ನು ಅನುಸರಿಸಿ, ಅಧಿಕೃತವಾದ ಮತ್ತು ಪರಿಶೀಲನೆಗೆ (ವೆರಿಫೈಡ್‌) ಒಳಪಟ್ಟ ಟ್ವಿಟರ್‌ ಖಾತೆಗಳಿಗೆ ಮಾತ್ರ ಈ ಹಿಂದೆ ಬ್ಲೂಟಿಕ್‌ ನೀಡಲಾಗುತ್ತಿತ್ತು. ರಾಜಕಾರಣಿಗಳು, ಸಿನಿಮಾ ನಟರು, ಸಾಮಾಜಿಕ ರಂಗದಲ್ಲಿರುವವರು, ಪ್ರತಿಷ್ಠಿತ ಸಂಸ್ಥೆಗಳು…. ಒಟ್ಟಾರೆಯಾಗಿ ಖ್ಯಾತನಾಮರು ಈ ವ್ಯವಸ್ಥೆಯಲ್ಲಿ ಹಲವು ವರ್ಷಗಳಿಂದ ಉಚಿತವಾಗಿ ‘ಬ್ಲೂ ಟಿಕ್’ ಹೊಂದಿದ್ದರು.

ಈ ಮಧ್ಯೆ, ಟೆಸ್ಲಾದ ಸಿಇಒ, ವಿಶ್ವದ ಶ್ರೀಮಂತ ಉದ್ಯಮಿ ಇಲಾನ್‌ ಮಸ್ಕ್‌ 2022ರ ಅಕ್ಟೋಬರ್‌ನಲ್ಲಿ ಟ್ವಿಟರ್ ಅನ್ನು 44 ಶತಕೋಟಿ ಡಾಲರ್‌ಗೆ (₹3.61 ಲಕ್ಷ ಕೋಟಿ) ಖರೀದಿಸಿದ್ದರು.

ಬ್ಲೂಟಿಕ್‌ ಹೊಂದಿರುವ ಖಾತೆದಾರರು ತಮ್ಮ ‘ವೆರಿಫೈಡ್‌’ ಸ್ಥಾನಮಾನ ಉಳಿಸಿಕೊಳ್ಳಬೇಕಿದ್ದರೆ ತಿಂಗಳಿಗೆ 8 ಡಾಲರ್‌ (₹657.24) ನೀಡಬೇಕಾಗುತ್ತದೆ ಎಂದು ಮಸ್ಕ್‌ ಹೇಳಿದ್ದರು. ಇಲ್ಲವಾದರೆ ಬ್ಲೂಟಿಕ್‌ ಗುರುತುಗಳನ್ನು ಕಳೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದ್ದರು.

ಖಾತೆದಾರರು ಬ್ಲೂ ಟಿಕ್‌ ಉಳಿಸಿಕೊಳ್ಳಬೇಕಾದರೆ ಮಾಸಿಕ 20 ಡಾಲರ್‌ ಶುಲ್ಕ ಪಾವತಿಸಬೇಕು ಎಂದು ಮಸ್ಕ್‌ ಆರಂಭದಲ್ಲಿ ಹೇಳಿದ್ದರಾದರೂ, ತೀವ್ರ ವಿರೋಧಗಳ ಹಿನ್ನೆಲೆಯಲ್ಲಿ ಶುಲ್ಕ ತಗ್ಗಿಸಿದ್ದರು. ಪಾವತಿ ಮಾಡದವರ ‘ಬ್ಲೂ ಟಿಕ್‌’ಗಳನ್ನು ಏಪ್ರಿಲ್ ಆರಂಭದಿಂದಲೇ ತೆಗೆಯಲಾಗುವುದು ಎಂದು ಮಸ್ಕ್‌ ಹೇಳಿದ್ದರು. ಅದರಂತೆ ಕೆಲವರ ‘ಬ್ಲೂ ಟಿಕ್‌’ಗಳು ಕಣ್ಮರೆಗೊಂಡಿದ್ದವು. ಆದರೆ, ಗುರುವಾರ ಈ ಪ್ರಕ್ರಿಯೆ ಸಾಮೂಹಿಕವಾಗಿ ನಡೆದಿದೆ.

‘ನಾವು ‘ಬ್ಲೂ ಟಿಕ್‌’ ವೆರಿಪೈಡ್‌ ಗುರುತುಗಳನ್ನು ತೆಗೆದುಹಾಕುತ್ತಿದ್ದೇವೆ. ಟ್ವಿಟರ್‌ನಲ್ಲಿ ವೆರಿಫೈಡ್‌ ಖಾತೆಗಳನ್ನು ಉಳಿಸಿಕೊಳ್ಳಲು ‘ಟ್ವಿಟರ್‌ ಬ್ಲೂ’ಗೆ ಸೈನ್‌ಅಪ್‌ ಆಗಿ’ ಎಂದು ಟ್ವಿಟರ್‌ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಟ್ವಿಟರ್‌ನ ಈ ನಿರ್ಧಾರದ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾತೆಗಳನ್ನು ಇನ್ನು ಮುಂದೆ ದೃಢೀಕರಿಸಲು ಕಷ್ಟವಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ನಕಲಿ ಖಾತೆಗಳು ಹಣ ಪಾವತಿಸಿ ಬ್ಲೂಟಿಕ್‌ ಪಡೆದುಕೊಂಡು ವಂಚಿಸುವ ಸಾಧ್ಯತೆಗಳು ಹೆಚ್ಚಾಗಲಿವೆ ಎಂದು ಆರೋಪಿಸಿದ್ದಾರೆ.

ಟ್ವಿಟರ್ ಅನ್ನು ಸಂಪೂರ್ಣವಾಗಿ ತ್ಯಜಿಸುವುದಾಗಿ ಕೆಲ ಸೆಲೆಬ್ರಿಟಿಗಳು ಹೇಳಿದ್ದರೆ, ಕೆಲ ಮಂದಿ ಈ ಬದಲಾವಣೆಯನ್ನು ಒಪ್ಪಲು ನಿರಾಕರಿಸಿದ್ದಾರೆ. ಹಣ ಪಾವತಿಸುವುದಿಲ್ಲ ಎಂದಿದ್ದಾರೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

6 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

19 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

19 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

19 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

19 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

19 hours ago