BREAKING NEWS

ಖ್ಯಾತನಾಮರ ಖಾತೆಗಳ ‘ಬ್ಲೂ ಟಿಕ್‌’ ಹಿಂಪಡೆಯಲಾರಂಭಿಸಿದ ಟ್ವಿಟರ್‌

ಲಾಸ್‌ ಏಂಜಲೀಸ್‌: ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಅಧಿಕೃತ ಟ್ವಿಟರ್ ಖಾತೆಗಳಿಂದ ‘ಬ್ಲೂ ಟಿಕ್‌’ ಗುರುತನ್ನು ತೆಗೆದುಹಾಕುವ ಕಾರ್ಯವನ್ನು ಟ್ವಿಟರ್ ಗುರುವಾರದಿಂದ ಆರಂಭಿಸಿದೆ.

ಹಲವು ಮಾನದಂಡಗಳನ್ನು ಅನುಸರಿಸಿ, ಅಧಿಕೃತವಾದ ಮತ್ತು ಪರಿಶೀಲನೆಗೆ (ವೆರಿಫೈಡ್‌) ಒಳಪಟ್ಟ ಟ್ವಿಟರ್‌ ಖಾತೆಗಳಿಗೆ ಮಾತ್ರ ಈ ಹಿಂದೆ ಬ್ಲೂಟಿಕ್‌ ನೀಡಲಾಗುತ್ತಿತ್ತು. ರಾಜಕಾರಣಿಗಳು, ಸಿನಿಮಾ ನಟರು, ಸಾಮಾಜಿಕ ರಂಗದಲ್ಲಿರುವವರು, ಪ್ರತಿಷ್ಠಿತ ಸಂಸ್ಥೆಗಳು…. ಒಟ್ಟಾರೆಯಾಗಿ ಖ್ಯಾತನಾಮರು ಈ ವ್ಯವಸ್ಥೆಯಲ್ಲಿ ಹಲವು ವರ್ಷಗಳಿಂದ ಉಚಿತವಾಗಿ ‘ಬ್ಲೂ ಟಿಕ್’ ಹೊಂದಿದ್ದರು.

ಈ ಮಧ್ಯೆ, ಟೆಸ್ಲಾದ ಸಿಇಒ, ವಿಶ್ವದ ಶ್ರೀಮಂತ ಉದ್ಯಮಿ ಇಲಾನ್‌ ಮಸ್ಕ್‌ 2022ರ ಅಕ್ಟೋಬರ್‌ನಲ್ಲಿ ಟ್ವಿಟರ್ ಅನ್ನು 44 ಶತಕೋಟಿ ಡಾಲರ್‌ಗೆ (₹3.61 ಲಕ್ಷ ಕೋಟಿ) ಖರೀದಿಸಿದ್ದರು.

ಬ್ಲೂಟಿಕ್‌ ಹೊಂದಿರುವ ಖಾತೆದಾರರು ತಮ್ಮ ‘ವೆರಿಫೈಡ್‌’ ಸ್ಥಾನಮಾನ ಉಳಿಸಿಕೊಳ್ಳಬೇಕಿದ್ದರೆ ತಿಂಗಳಿಗೆ 8 ಡಾಲರ್‌ (₹657.24) ನೀಡಬೇಕಾಗುತ್ತದೆ ಎಂದು ಮಸ್ಕ್‌ ಹೇಳಿದ್ದರು. ಇಲ್ಲವಾದರೆ ಬ್ಲೂಟಿಕ್‌ ಗುರುತುಗಳನ್ನು ಕಳೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದ್ದರು.

ಖಾತೆದಾರರು ಬ್ಲೂ ಟಿಕ್‌ ಉಳಿಸಿಕೊಳ್ಳಬೇಕಾದರೆ ಮಾಸಿಕ 20 ಡಾಲರ್‌ ಶುಲ್ಕ ಪಾವತಿಸಬೇಕು ಎಂದು ಮಸ್ಕ್‌ ಆರಂಭದಲ್ಲಿ ಹೇಳಿದ್ದರಾದರೂ, ತೀವ್ರ ವಿರೋಧಗಳ ಹಿನ್ನೆಲೆಯಲ್ಲಿ ಶುಲ್ಕ ತಗ್ಗಿಸಿದ್ದರು. ಪಾವತಿ ಮಾಡದವರ ‘ಬ್ಲೂ ಟಿಕ್‌’ಗಳನ್ನು ಏಪ್ರಿಲ್ ಆರಂಭದಿಂದಲೇ ತೆಗೆಯಲಾಗುವುದು ಎಂದು ಮಸ್ಕ್‌ ಹೇಳಿದ್ದರು. ಅದರಂತೆ ಕೆಲವರ ‘ಬ್ಲೂ ಟಿಕ್‌’ಗಳು ಕಣ್ಮರೆಗೊಂಡಿದ್ದವು. ಆದರೆ, ಗುರುವಾರ ಈ ಪ್ರಕ್ರಿಯೆ ಸಾಮೂಹಿಕವಾಗಿ ನಡೆದಿದೆ.

‘ನಾವು ‘ಬ್ಲೂ ಟಿಕ್‌’ ವೆರಿಪೈಡ್‌ ಗುರುತುಗಳನ್ನು ತೆಗೆದುಹಾಕುತ್ತಿದ್ದೇವೆ. ಟ್ವಿಟರ್‌ನಲ್ಲಿ ವೆರಿಫೈಡ್‌ ಖಾತೆಗಳನ್ನು ಉಳಿಸಿಕೊಳ್ಳಲು ‘ಟ್ವಿಟರ್‌ ಬ್ಲೂ’ಗೆ ಸೈನ್‌ಅಪ್‌ ಆಗಿ’ ಎಂದು ಟ್ವಿಟರ್‌ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಟ್ವಿಟರ್‌ನ ಈ ನಿರ್ಧಾರದ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾತೆಗಳನ್ನು ಇನ್ನು ಮುಂದೆ ದೃಢೀಕರಿಸಲು ಕಷ್ಟವಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ನಕಲಿ ಖಾತೆಗಳು ಹಣ ಪಾವತಿಸಿ ಬ್ಲೂಟಿಕ್‌ ಪಡೆದುಕೊಂಡು ವಂಚಿಸುವ ಸಾಧ್ಯತೆಗಳು ಹೆಚ್ಚಾಗಲಿವೆ ಎಂದು ಆರೋಪಿಸಿದ್ದಾರೆ.

ಟ್ವಿಟರ್ ಅನ್ನು ಸಂಪೂರ್ಣವಾಗಿ ತ್ಯಜಿಸುವುದಾಗಿ ಕೆಲ ಸೆಲೆಬ್ರಿಟಿಗಳು ಹೇಳಿದ್ದರೆ, ಕೆಲ ಮಂದಿ ಈ ಬದಲಾವಣೆಯನ್ನು ಒಪ್ಪಲು ನಿರಾಕರಿಸಿದ್ದಾರೆ. ಹಣ ಪಾವತಿಸುವುದಿಲ್ಲ ಎಂದಿದ್ದಾರೆ.

andolanait

Recent Posts

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

26 mins ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

30 mins ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

34 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

1 hour ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

1 hour ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

2 hours ago