ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಹುತಾತ್ಮರಾಗಿದ್ದಾರೆ.
ಭಯೋತ್ಪಾದಕರ ಗುಂಡೇಟಿಗೆ ಭಾರತೀಯ ಯೋಧ ಕರ್ನಲ್ ಮನ್ಪ್ರೀತ್ ಸಿಂಗ್ ಹಾಗೂ ಮೇಜರ್ ಆಶಿಶ್ ಧೋಂಚಕ್ ಹುತಾತ್ಮರಾಗಿದ್ದಾರೆ. ಈ ಕುರಿತು ಜನರಲ್ ವಿಕೆ ಸಿಂಗ್ ಟ್ವೀಟ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಕರ್ನಲ್ ಮನ್ಪ್ರೀತ್ ಸಿಂಗ್ ಅವರು 19 ರಾಷ್ಟ್ರೀಯ ರೈಫಲ್ಸ್ (19 ಖಖ) ಘಟಕದ ಕಮಾಂಡಿಂಗ್ ಅಧಿಕಾರಿಯಾಗಿದ್ದರು. ಅನಂತನಾಗ್ನ ಕೋಕರ್ನಾಗ್ ಪ್ರದೇಶದ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರು ನಡೆಸಿದ ಭಾರೀ ಗುಂಡಿನ ದಾಳಿಯ ನಡುವೆಯೇ ಅಧಿಕಾರಿಯ ಮೃತದೇಹವನ್ನು ಹೊರತೆಗೆಯಲಾಗಿದೆ.
ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಸೇನೆಯ 15 ಕಾಪ್ರ್ಸ್ ಕಮಾಂಡರ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಎನ್ಕೌಂಟರ್ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಮತ್ತು ಮೃತದೇಹಗಳ ತೆರವು ಕಾರ್ಯದ ಮೇಲ್ವಿಚಾರಣೆ ಮಾಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…