ಮಂಡ್ಯ : ಕಾವೇರಿ ನೀರಿಗಾಗಿ ನಾಡಿನ ಹಿತರಕ್ಷಣೆಗೆ ಹೋರಾಡುತ್ತಿರುವ ರೈತರು ಮತ್ತು ಸರ್ಕಾರದ ಹೋರಾಟಕ್ಕೆ ಮಂಡ್ಯ ಜಿಲ್ಲೆಯ ಇಬ್ಬರೂ ರೈತರು ಕೈ ಜೋಡಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಮೂಲಕ ಕಾನೂನು ಸಂಘರ್ಷಕ್ಕೆ ಇಳಿದಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ತರಿಕೇರೆ ಗ್ರಾಮದ ಪ್ರಗತಿಪರ ರೈತ ಕೆ ಕೆಂಪರಾಜು ಮತ್ತು ಪಾಂಡವಪುರದ ನಿವೃತ ಯೋಧ ಮತ್ತು ರೈತ ಆರ್ ಪಿ ರವಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಮೂಲ ದಾವೆಯಲ್ಲಿ ತಮ್ಮನ್ನು ಪಕ್ಷಗಾರನ್ನಾಗಿಸಿ ರೈತರ ಅಹವಾಲು ಆಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಈಗಾಗಲೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ರೈತಸಂಘದ ಪರವಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು ಇದೀಗ ಇಬ್ಬರೂ ರೈತರು ಸಲ್ಲಿಸಿರುವ ಅರ್ಜಿಗಳು ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು ಸರ್ಕಾರದ ಜೊತೆ ರೈತರು ಮತ್ತು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಪರಿಸ್ಥಿತಿ ಯನ್ನು ನ್ಯಾಯಾಲಯದ ಗಮನಕ್ಕೆ ತರಲು ಅವಕಾಶವಾಗಲಿದೆ.
ಕಾನೂನು ಸಂಘರ್ಷಕ್ಕೆ ಮಂಡ್ಯ ರೈತರು ಮುಂದಾಗುವ ಮೂಲಕ ತಮ್ಮ ಹೋರಟ ಕೇವಲ ಸಾಂಕೇತಿಕವಾಗಿರದೆ ರೈತರ ಹಿತರಕ್ಷಣೆಗೆ ನೆರೆಯ ರಾಜ್ಯದ ಕಾನೂನು ಹೋರಟಕ್ಕೆ ಪ್ರತಿ ಸವಾಲು ಎಸೆಯುವ ಮೂಲಕ ಗಮನ ಸೆಳೆದಿದ್ದಾರೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…