ಮಂಡ್ಯ : ಕಾವೇರಿ ನೀರಿಗಾಗಿ ನಾಡಿನ ಹಿತರಕ್ಷಣೆಗೆ ಹೋರಾಡುತ್ತಿರುವ ರೈತರು ಮತ್ತು ಸರ್ಕಾರದ ಹೋರಾಟಕ್ಕೆ ಮಂಡ್ಯ ಜಿಲ್ಲೆಯ ಇಬ್ಬರೂ ರೈತರು ಕೈ ಜೋಡಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಮೂಲಕ ಕಾನೂನು ಸಂಘರ್ಷಕ್ಕೆ ಇಳಿದಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ತರಿಕೇರೆ ಗ್ರಾಮದ ಪ್ರಗತಿಪರ ರೈತ ಕೆ ಕೆಂಪರಾಜು ಮತ್ತು ಪಾಂಡವಪುರದ ನಿವೃತ ಯೋಧ ಮತ್ತು ರೈತ ಆರ್ ಪಿ ರವಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಮೂಲ ದಾವೆಯಲ್ಲಿ ತಮ್ಮನ್ನು ಪಕ್ಷಗಾರನ್ನಾಗಿಸಿ ರೈತರ ಅಹವಾಲು ಆಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಈಗಾಗಲೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ರೈತಸಂಘದ ಪರವಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು ಇದೀಗ ಇಬ್ಬರೂ ರೈತರು ಸಲ್ಲಿಸಿರುವ ಅರ್ಜಿಗಳು ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು ಸರ್ಕಾರದ ಜೊತೆ ರೈತರು ಮತ್ತು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಪರಿಸ್ಥಿತಿ ಯನ್ನು ನ್ಯಾಯಾಲಯದ ಗಮನಕ್ಕೆ ತರಲು ಅವಕಾಶವಾಗಲಿದೆ.
ಕಾನೂನು ಸಂಘರ್ಷಕ್ಕೆ ಮಂಡ್ಯ ರೈತರು ಮುಂದಾಗುವ ಮೂಲಕ ತಮ್ಮ ಹೋರಟ ಕೇವಲ ಸಾಂಕೇತಿಕವಾಗಿರದೆ ರೈತರ ಹಿತರಕ್ಷಣೆಗೆ ನೆರೆಯ ರಾಜ್ಯದ ಕಾನೂನು ಹೋರಟಕ್ಕೆ ಪ್ರತಿ ಸವಾಲು ಎಸೆಯುವ ಮೂಲಕ ಗಮನ ಸೆಳೆದಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…