BREAKING NEWS

ಹಮಾಸ್ ಉಗ್ರರಿಂದ ಇಬ್ಬರು ಒತ್ತೆಯಾಳುಗಳ ಬಿಡುಗಡೆ

ಟೆಲ್ ಅವೀವ್ : ಇಸ್ರೇಲ್‍ನಿಂದ ಹಮಾಸ್ ಉಗ್ರರು ಅಪಹರಿಸಿದ್ದ 200 ಒತ್ತೆಯಾಳುಗಳ ಪೈಕಿ ಇಬ್ಬರು ಅಮೆರಿಕದ ಪ್ರಜೆಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನೂ ಹೆಚ್ಚಿನ ಜನರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ.

ಹಮಾಸ್ ಉಗ್ರರ ವಶದಲ್ಲಿದ್ದ ಅಮೆರಿಕ ಮೂಲದ ಜುಡಿತ್ ತೈ ರಾನನ್ ಮತ್ತು ಅವರ ಮಗಳು ನಟಾಲಿ ಶೋಷನಾ ರಾನನ್ ತಡರಾತ್ರಿ ಇಸ್ರೇಲ್‍ಗೆ ಮರಳಿದ್ದಾರೆ. ಅವರ ಬಿಡುಗಡೆ ಬಳಿಕ ಅಮೆರಿಕ ಅಧ್ಯಕ್ಷ್ಯ ಜೋ ಬೈಡನ್ ಅವರ ಬಳಿ ಫೋನ್‍ನಲ್ಲಿ ಮಾತಾಡಿದ್ದಾರೆ. ಈ ವಿಷಯ ಬಹಳ ಸಂತೋಷ ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಒತ್ತೆಯಾಳುಗಳನ್ನು ಮುಕ್ತಗೊಳಿಸಲು ಕತಾರ್ ಮತ್ತು ಈಜಿಪ್ಟ್‌ನೊಂದಿಗೆ ಮಾತುಕತೆ ನಡೆಸಿ ಒತ್ತಡ ಹಾಕಲಾಗುತ್ತಿದೆ. ಇದರಿಂದ ಹೆಚ್ಚಿನ ಜನರ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇದು ಸಾಂಕೇತಿಕವಾಗಿ ಆದ ಬಿಡುಗಡೆ ಎಂದು ಇಸ್ರೇಲ್ ಸರ್ಕಾರ ಹೇಳಿಕೊಂಡಿದೆ.

ಅಕ್ಟೋಬರ್ 7 ರಂದು ಇಸ್ರೇಲ್-ಗಾಜಾ ಗಡಿಯ ಸಮೀಪವಿರುವ ನಹಾಲ್ ಓಜ್ ಕಿಬ್ಬುಟ್ಜ್‍ನಿಂದ ಹಮಾಸ್ ಉಗ್ರರು ಅವರನ್ನು ಅಪಹರಿಸಿದ್ದರು. ಅಪಹರಿಸಲ್ಪಟ್ಟವರಲ್ಲಿ ಹೆಚ್ಚಿನವರು ಇನ್ನೂ ಜೀವಂತವಾಗಿದ್ದಾರೆ. 20 ಕ್ಕೂ ಹೆಚ್ಚು ಒತ್ತೆಯಾಳುಗಳು ಅಪ್ರಾಪ್ತರಾಗಿದ್ದಾರೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.

lokesh

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

18 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

42 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

1 hour ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago