ನವದೆಹಲಿ : ದೆಹಲಿ ವಿಮಾನ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ ವಿಸ್ತಾರ ಕಂಪೆನಿಯ ಎರಡು ವಿಮಾನಗಳು ಒಂದೇ ರನ್ ವೇಯಲ್ಲಿ ಇಳಿದಿದ್ದು ಅಹಮದಾಬಾದ್-ದಿಲ್ಲಿ ವಿಮಾನದ ಪೈಲಟ್ ಕ್ಯಾಪ್ಟನ್ ಸೋನು ಗಿಲ್ ಅವರ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ.
ಈ ಎರಡು ವಿಮಾನಗಳು ಒಟ್ಟು 300 ಜನರನ್ನು ಹೊತ್ತು ಸಾಗುತ್ತಿದ್ದು, ಮಹಿಳಾ ಪೈಲಟ್ ಸಮಯೋಚಿತ ಕಾರ್ಯಕ್ಕೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.
ಅಹಮದಾಬಾದ್-ದಿಲ್ಲಿ ವಿಮಾನವು ಈಗಷ್ಟೇ ಇಳಿದಿತ್ತು ಹಾಗೂ ಪಾರ್ಕಿಂಗ್ ವೇ ತಲುಪಲು ಸಕ್ರಿಯ ರನ್ ವೇ ದಾಟಲು ಏರ್ ಟ್ರಾಫಿಕ್ ಕಂಟ್ರೋಲ್ ನಿಂದ ಸೂಚನೆ ನೀಡಲಾಗಿತ್ತು. ಈ ಮಧ್ಯೆ, ವಿಸ್ತಾರಾ ಏರ್ಲೈನ್ಸ್ ನ ದಿಲ್ಲಿ-ಬಾಗ್ಡೋಗ್ರಾ ವಿಮಾನವನ್ನು ಅದೇ ರನ್ವೇಯಲ್ಲಿ ಟೇಕ್-ಆಫ್ ಮಾಡಲು ಅನುಮತಿ ನೀಡಲಾಯಿತು. ಅಹಮದಾಬಾದ್- ದಿಲ್ಲಿ ವಿಮಾನದ 45 ವರ್ಷದ ಕ್ಯಾಪ್ಟನ್ ಸೋನು ಗಿಲ್ ಅವರ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿತು.
ವಿಮಾನಗಳು 1.8 ಕಿಮೀ ಅಥವಾ 1,800 ಮೀಟರ್ ದೂರದಲ್ಲಿದ್ದವು ಎಂದು ಮೂಲಗಳು ತಿಳಿಸಿವೆ, ಪೈಲಟ್ ಎಟಿಸಿಗೆ ಇತರ ವಿಮಾನದ ಇರುವ ಬಗ್ಗೆ ಎಚ್ಚರಿಕೆ ನೀಡದೇ ಇರುತ್ತಿದ್ದರೆ, ಫಲಿತಾಂಶವು ವಿನಾಶಕಾರಿಯಾಗಬಹುದಿತ್ತು ಎಂದು ತಿಳಿದುಬಂದಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…