ನವದೆಹಲಿ : ದೆಹಲಿ ವಿಮಾನ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ ವಿಸ್ತಾರ ಕಂಪೆನಿಯ ಎರಡು ವಿಮಾನಗಳು ಒಂದೇ ರನ್ ವೇಯಲ್ಲಿ ಇಳಿದಿದ್ದು ಅಹಮದಾಬಾದ್-ದಿಲ್ಲಿ ವಿಮಾನದ ಪೈಲಟ್ ಕ್ಯಾಪ್ಟನ್ ಸೋನು ಗಿಲ್ ಅವರ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ.
ಈ ಎರಡು ವಿಮಾನಗಳು ಒಟ್ಟು 300 ಜನರನ್ನು ಹೊತ್ತು ಸಾಗುತ್ತಿದ್ದು, ಮಹಿಳಾ ಪೈಲಟ್ ಸಮಯೋಚಿತ ಕಾರ್ಯಕ್ಕೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.
ಅಹಮದಾಬಾದ್-ದಿಲ್ಲಿ ವಿಮಾನವು ಈಗಷ್ಟೇ ಇಳಿದಿತ್ತು ಹಾಗೂ ಪಾರ್ಕಿಂಗ್ ವೇ ತಲುಪಲು ಸಕ್ರಿಯ ರನ್ ವೇ ದಾಟಲು ಏರ್ ಟ್ರಾಫಿಕ್ ಕಂಟ್ರೋಲ್ ನಿಂದ ಸೂಚನೆ ನೀಡಲಾಗಿತ್ತು. ಈ ಮಧ್ಯೆ, ವಿಸ್ತಾರಾ ಏರ್ಲೈನ್ಸ್ ನ ದಿಲ್ಲಿ-ಬಾಗ್ಡೋಗ್ರಾ ವಿಮಾನವನ್ನು ಅದೇ ರನ್ವೇಯಲ್ಲಿ ಟೇಕ್-ಆಫ್ ಮಾಡಲು ಅನುಮತಿ ನೀಡಲಾಯಿತು. ಅಹಮದಾಬಾದ್- ದಿಲ್ಲಿ ವಿಮಾನದ 45 ವರ್ಷದ ಕ್ಯಾಪ್ಟನ್ ಸೋನು ಗಿಲ್ ಅವರ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿತು.
ವಿಮಾನಗಳು 1.8 ಕಿಮೀ ಅಥವಾ 1,800 ಮೀಟರ್ ದೂರದಲ್ಲಿದ್ದವು ಎಂದು ಮೂಲಗಳು ತಿಳಿಸಿವೆ, ಪೈಲಟ್ ಎಟಿಸಿಗೆ ಇತರ ವಿಮಾನದ ಇರುವ ಬಗ್ಗೆ ಎಚ್ಚರಿಕೆ ನೀಡದೇ ಇರುತ್ತಿದ್ದರೆ, ಫಲಿತಾಂಶವು ವಿನಾಶಕಾರಿಯಾಗಬಹುದಿತ್ತು ಎಂದು ತಿಳಿದುಬಂದಿದೆ.
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…