BREAKING NEWS

ಹೊಸ ವರ್ಷಾಚರಣೆ ಮುಗಿಸಿ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅಪಘಾತಕ್ಕೆ ಬಲಿ

ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುವ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ಮೂಲತಃ ಹಾಸನ ನಿವಾಸಿಯಾದ ಸಧ್ಯ ಪಡುವಾರಹಳ್ಳಿಯಲ್ಲಿ ವಾಸಿಸುತ್ತಿದ್ದ ಇಂದ್ರಾಂಣಿ ಎಂಬವರ ಮಗ ಹೃತಿಕ್ ಧರಣಿ(೨೪) ಹಾಗೂ ಮೂಲತಃ ಬೆಟ್ಟದಪುರ ತಾಲ್ಲೂಕು ಕೌನಳ್ಳಿ ನಿವಾಸಿಯಾದ ಸಧ್ಯ ಹಿನಕಲ್‌ನಲ್ಲಿ ವಾಸಿಸುತ್ತಿದ್ದ ಶಕುಂತ ಎಂಬವರ ಮಗ ಕೆ.ಎನ್.ಸಂಪತ್(೧೯) ಎಂಬವರೇ ಅಪಘಾತದಲ್ಲಿ ಮೃತಪಟ್ಟವರು.

ಹೃತಿಕ್ ಹಾಗೂ ಸಂಪತ್ ಎಂಬವರು ನಗರದ ಹುಣಸೂರು ರಸ್ತೆಯಲ್ಲರುವ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ದ್ವಿತೀಯ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದರು. ಹೊಸ ವರ್ಷಾಚರಣೆ ಸಂಬಂದ ಇಬ್ಬರೂ ಕೂಡ ಭಾನುವಾರ ನಗರದೆಲ್ಲೆಡೆ ರಾತ್ರಿ ೨ ಗಂಟೆ ವರೆಗೂ ಸುತ್ತಾಡಿದ್ದಾರೆ.

ಅಂತಿಮವಾಗಿ ರಾತ್ರಿ ೩ ಗಂಟೆ ವೇಳೆಯಲ್ಲಿ ಮನೆಗೆ ತೆರಳಲು ತೀರ್ಮಾನಿಸಿದ್ದಾರೆ. ಸಂಪತ್ ಮನೆ ಹಿನಕಲ್‌ನಲ್ಲಿ ಇದ್ದ ಕಾರಣ ಆತನನ್ನು ಮನೆಗೆ ಬಿಡಲು ಹೃತಿಕ್ ತನ್ನ ಬೈಕ್‌ನಲ್ಲಿ ಕರೆದೊಯ್ದಿದ್ದಾನೆ. ಇದೇ ವೇಳೆ ಜೆಸಿ ಕಾಲೆಜಿಗೆ ತೆರಳುವ ರಸ್ತೆಯ ತಿರುವಿನಲ್ಲಿ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ.

ಇದರಿಂದ ಇಬ್ಬರಿಗೂ ತಲೆಯ ಭಾಗಕ್ಕೆ ತೀವ್ರ ಪೆಟ್ಟಾದ ಕಾರಣ ಇಬ್ಬರು ಕೂಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಚಾರ ತಿಳಿದ ವಿವಿಪುರಂ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಲವ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಕೆಆರ್ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.

ಹೃತಿಕ್ ಅವರ ತಂದೆ ಮೃತಪಟ್ಟಿದ್ದು, ತಾಯಿ ಇಂದ್ರಾಣಿ ಅವರು ಶಿಕ್ಷಿಕಿಯಾ ಗಿದ್ದಾರೆ. ಮಗನ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಓದಿಸುತ್ತಿದ್ದರ

ಇನ್ನು ಸಂಪತ್ ತಂದೆ ಕೂಡ ಮೃತಪಟ್ಟಿದ್ದು, ಆತನ ತಾಯಿ ಶಕುಂತಲ ಅವರು ಊರಿನಲ್ಲಿ ಇದ್ದುಕೊಂಡೇ ಮಗನ ವಿದ್ಯಾಭ್ಸಾಸಕ್ಕೆ ನೆರವಾಗಿದ್ದರು.

ಕುಟುಂಬಸ್ತರ ಆಕ್ರಂದನ: ಹೃತಿಕ್ ಹಾಗೂ ಸಂಪತ್ ಅವರ ಸಾವಿನ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಕುಟುಂಬಸ್ತರ ಆಕ್ರಂದನ ಮುಗಿಲುಮುಟ್ಟಿತು.ಸೆಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಕೂಡ ಆಗಮಿಸಿ ಸ್ನೇಹಿತರ ಸಾವಿಗೆ ಮಮ್ಮಲ ಮರುಗಿದರು. ಈ ಸಂಬಂದ ವಿವಿಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

12 mins ago

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

51 mins ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

1 hour ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

2 hours ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

3 hours ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

3 hours ago