BREAKING NEWS

ಹೊಸ ವರ್ಷಾಚರಣೆ ಮುಗಿಸಿ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅಪಘಾತಕ್ಕೆ ಬಲಿ

ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುವ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ಮೂಲತಃ ಹಾಸನ ನಿವಾಸಿಯಾದ ಸಧ್ಯ ಪಡುವಾರಹಳ್ಳಿಯಲ್ಲಿ ವಾಸಿಸುತ್ತಿದ್ದ ಇಂದ್ರಾಂಣಿ ಎಂಬವರ ಮಗ ಹೃತಿಕ್ ಧರಣಿ(೨೪) ಹಾಗೂ ಮೂಲತಃ ಬೆಟ್ಟದಪುರ ತಾಲ್ಲೂಕು ಕೌನಳ್ಳಿ ನಿವಾಸಿಯಾದ ಸಧ್ಯ ಹಿನಕಲ್‌ನಲ್ಲಿ ವಾಸಿಸುತ್ತಿದ್ದ ಶಕುಂತ ಎಂಬವರ ಮಗ ಕೆ.ಎನ್.ಸಂಪತ್(೧೯) ಎಂಬವರೇ ಅಪಘಾತದಲ್ಲಿ ಮೃತಪಟ್ಟವರು.

ಹೃತಿಕ್ ಹಾಗೂ ಸಂಪತ್ ಎಂಬವರು ನಗರದ ಹುಣಸೂರು ರಸ್ತೆಯಲ್ಲರುವ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ದ್ವಿತೀಯ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದರು. ಹೊಸ ವರ್ಷಾಚರಣೆ ಸಂಬಂದ ಇಬ್ಬರೂ ಕೂಡ ಭಾನುವಾರ ನಗರದೆಲ್ಲೆಡೆ ರಾತ್ರಿ ೨ ಗಂಟೆ ವರೆಗೂ ಸುತ್ತಾಡಿದ್ದಾರೆ.

ಅಂತಿಮವಾಗಿ ರಾತ್ರಿ ೩ ಗಂಟೆ ವೇಳೆಯಲ್ಲಿ ಮನೆಗೆ ತೆರಳಲು ತೀರ್ಮಾನಿಸಿದ್ದಾರೆ. ಸಂಪತ್ ಮನೆ ಹಿನಕಲ್‌ನಲ್ಲಿ ಇದ್ದ ಕಾರಣ ಆತನನ್ನು ಮನೆಗೆ ಬಿಡಲು ಹೃತಿಕ್ ತನ್ನ ಬೈಕ್‌ನಲ್ಲಿ ಕರೆದೊಯ್ದಿದ್ದಾನೆ. ಇದೇ ವೇಳೆ ಜೆಸಿ ಕಾಲೆಜಿಗೆ ತೆರಳುವ ರಸ್ತೆಯ ತಿರುವಿನಲ್ಲಿ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ.

ಇದರಿಂದ ಇಬ್ಬರಿಗೂ ತಲೆಯ ಭಾಗಕ್ಕೆ ತೀವ್ರ ಪೆಟ್ಟಾದ ಕಾರಣ ಇಬ್ಬರು ಕೂಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಚಾರ ತಿಳಿದ ವಿವಿಪುರಂ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಲವ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಕೆಆರ್ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.

ಹೃತಿಕ್ ಅವರ ತಂದೆ ಮೃತಪಟ್ಟಿದ್ದು, ತಾಯಿ ಇಂದ್ರಾಣಿ ಅವರು ಶಿಕ್ಷಿಕಿಯಾ ಗಿದ್ದಾರೆ. ಮಗನ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಓದಿಸುತ್ತಿದ್ದರ

ಇನ್ನು ಸಂಪತ್ ತಂದೆ ಕೂಡ ಮೃತಪಟ್ಟಿದ್ದು, ಆತನ ತಾಯಿ ಶಕುಂತಲ ಅವರು ಊರಿನಲ್ಲಿ ಇದ್ದುಕೊಂಡೇ ಮಗನ ವಿದ್ಯಾಭ್ಸಾಸಕ್ಕೆ ನೆರವಾಗಿದ್ದರು.

ಕುಟುಂಬಸ್ತರ ಆಕ್ರಂದನ: ಹೃತಿಕ್ ಹಾಗೂ ಸಂಪತ್ ಅವರ ಸಾವಿನ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಕುಟುಂಬಸ್ತರ ಆಕ್ರಂದನ ಮುಗಿಲುಮುಟ್ಟಿತು.ಸೆಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಕೂಡ ಆಗಮಿಸಿ ಸ್ನೇಹಿತರ ಸಾವಿಗೆ ಮಮ್ಮಲ ಮರುಗಿದರು. ಈ ಸಂಬಂದ ವಿವಿಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago