BREAKING NEWS

ಉದಯನಿಧಿ ಸ್ಟಾಲಿನ್‌ ಇನ್ನೂ ಬಚ್ಚ : ಪ್ರಮೋದ್ ಮುತಾಲಿಕ್

ಧಾರವಾಡ : ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್‌, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ.

ಪೆರಿಯಾರ್‌ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್‌ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago