ಧಾರವಾಡ : ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ.
ಪೆರಿಯಾರ್ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…