ಉಡುಪಿ : ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ವಾಶ್ ರೂಮ್ನಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಈಗ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯಪ್ರವೇಶಿಸಿದ್ದು, ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಖುಷ್ಬು ಸುಂದರ್ ನೇತೃತ್ವದ ಮಹಿಳಾ ಆಯೋಗದ ತಂಡ ನಗರಕ್ಕೆ ಭೇಟಿ ನೀಡಲಿದೆ.
ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಟ್ವೀಟ್ ಮಾಡಿದ್ದು, ಈ ಪ್ರಕರಣವನ್ನು ನಾವು ಪರಿಗಣಿಸಿದ್ದೇವೆ. ಮಹಿಳಾ ಆಯೋಗದ ದಕ್ಷಿಣ ಭಾರತದ ಸದಸ್ಯೆ ಖುಷ್ಬು ಸುಂದರ್ ಅವರು ಉಡುಪಿಗೆ ತೆರಳಿ ತನಿಖೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಬಿಜೆಪಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ರೇಖಾ ಶರ್ಮಾ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಟ್ವೀಟ್ನಲ್ಲಿ, ಉಡುಪಿಯ ಘಟನೆ ತುಂಬಾ ಸಾಮಾನ್ಯವಾದದ್ದು, ಸರಳವಾದದ್ದಲ್ಲ ಅಥವಾ ಕಣ್ತಪ್ಪಿನಿಂದ ಆಗಿಲ್ಲ. ವಾಶ್ ರೂಂನಲ್ಲಿ ಹಿಂದೂ ಹುಡುಗಿಯ ವಿಡಿಯೋ ರೆಕಾರ್ಡ್ ಮಾಡಿ, ಅದನ್ನು ಮುಸ್ಲಿಂ ಹುಡುಗರೊಂದಿಗೆ ಹಂಚಿಕೊಂಡಿದ್ದಾರೆ, ಸಾಮಾಜಿಕ ಮಾಧ್ಯಮದಲ್ಲಿ ಆ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಅದಕ್ಕೆ 3 ಮುಸ್ಲಿಂ ಹುಡುಗಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಇದು ಹಿಂದೂ ಹುಡುಗಿಯರ ವಿರುದ್ಧ ನಡೆದ ಪೂರ್ವ ನಿಯೋಜಿತ ಕೃತ್ಯವೇ? ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಬೇಕು ಮತ್ತು ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದರು.
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…