BREAKING NEWS

ಉಡುಪಿ ವಿಡಿಯೋ ಪ್ರಕರಣ : ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

ಉಡುಪಿ : ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ವಾಶ್‌ ರೂಮ್‌ನಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಈಗ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯಪ್ರವೇಶಿಸಿದ್ದು, ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಖುಷ್ಬು ಸುಂದರ್‌ ನೇತೃತ್ವದ ಮಹಿಳಾ ಆಯೋಗದ ತಂಡ ನಗರಕ್ಕೆ ಭೇಟಿ ನೀಡಲಿದೆ.

ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಟ್ವೀಟ್‌ ಮಾಡಿದ್ದು, ಈ ಪ್ರಕರಣವನ್ನು ನಾವು ಪರಿಗಣಿಸಿದ್ದೇವೆ. ಮಹಿಳಾ ಆಯೋಗದ ದಕ್ಷಿಣ ಭಾರತದ ಸದಸ್ಯೆ ಖುಷ್ಬು ಸುಂದರ್‌ ಅವರು ಉಡುಪಿಗೆ ತೆರಳಿ ತನಿಖೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಬಿಜೆಪಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರೇಖಾ ಶರ್ಮಾ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮ ಟ್ವೀಟ್‌ನಲ್ಲಿ, ಉಡುಪಿಯ ಘಟನೆ ತುಂಬಾ ಸಾಮಾನ್ಯವಾದದ್ದು, ಸರಳವಾದದ್ದಲ್ಲ ಅಥವಾ ಕಣ್ತಪ್ಪಿನಿಂದ ಆಗಿಲ್ಲ. ವಾಶ್ ರೂಂನಲ್ಲಿ ಹಿಂದೂ ಹುಡುಗಿಯ ವಿಡಿಯೋ ರೆಕಾರ್ಡ್‌ ಮಾಡಿ, ಅದನ್ನು ಮುಸ್ಲಿಂ ಹುಡುಗರೊಂದಿಗೆ ಹಂಚಿಕೊಂಡಿದ್ದಾರೆ, ಸಾಮಾಜಿಕ ಮಾಧ್ಯಮದಲ್ಲಿ ಆ ವಿಡಿಯೋವನ್ನು ವೈರಲ್‌ ಮಾಡಿದ್ದಾರೆ. ಅದಕ್ಕೆ 3 ಮುಸ್ಲಿಂ ಹುಡುಗಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಇದು ಹಿಂದೂ ಹುಡುಗಿಯರ ವಿರುದ್ಧ ನಡೆದ ಪೂರ್ವ ನಿಯೋಜಿತ ಕೃತ್ಯವೇ? ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಬೇಕು ಮತ್ತು ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದರು.

lokesh

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

2 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

2 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

12 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

17 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

18 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

18 hours ago