ಉತ್ತರ ಪ್ರದೇಶ: ಉಮೇಶ್ ಪಾಲ್ ಮರ್ಡರ್ ಪ್ರಕರಣದ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದ ಯುಪಿ ಎಸ್ಟಿಎಫ್ ತಂಡ ಭರ್ಜರಿ ಯಶಸ್ಸು ಕಂಡಿದೆ. ಪ್ರಕರಣದ ಆರೋಪಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್ ಅವರನ್ನು ಎನ್ಕೌಂಟರ್ ಮಾಡಲಾಗಿದೆ.
ಝಾನ್ಸಿಯಲ್ಲಿ ಅತಿಕ್ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್ ನನ್ನು ಎನ್ಕೌಂಟರ್ ಮಾಡಲಾಗಿದೆ. ಎನ್ಕೌಂಟರ್ನಲ್ಲಿ ಅಸದ್ ಮತ್ತು ಶೂಟರ್ ಗುಲಾಮ್ ಸಾವನ್ನಪ್ಪಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಇಬ್ಬರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು.
ಅಸದ್-ಗುಲಾಮ್ ಇಬ್ಬರ ಪತ್ತೆಗೆ 5-5 ಲಕ್ಷ ಬಹುಮಾನ ಘೋಷಿಸಲಾಗಿತ್ತು :
ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್ ಇಬ್ಬರೂ ಆರೋಪಿಗಳಾಗಿದ್ದರು. ಇಬ್ಬರ ಪತ್ತೆಗೆ 5 ಲಕ್ಷ ರೂಪಾಯಿ ಬಹುಮಾನ ಕೂಡಾ ಘೋಷಿಸಲಾಗಿತ್ತು. ಇದೀಗ ಯುಪಿ ಎಸ್ಟಿಎಫ್ ಡೆಪ್ಯುಟಿ ಎಸ್ಪಿ ನಾವೆಂದು ಮತ್ತು ಡೆಪ್ಯೂಟಿ ಎಸ್ಪಿ ವಿಮಲ್ ನೇತೃತ್ವದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರೂ ಹತರಾಗಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಿಂದ ವಿದೇಶಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…