BREAKING NEWS

ಉಮೇಶ್ ಪಾಲ್ ಹತ್ಯೆ ಪ್ರಕರಣ : ಅತೀಕ್ ಅಹ್ಮದ್ ಪುತ್ರ ಅಸದ್ ಎನ್ ಕೌಂಟರ್

ಉತ್ತರ ಪ್ರದೇಶ: ಉಮೇಶ್ ಪಾಲ್ ಮರ್ಡರ್ ಪ್ರಕರಣದ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದ ಯುಪಿ ಎಸ್‌ಟಿಎಫ್ ತಂಡ ಭರ್ಜರಿ ಯಶಸ್ಸು ಕಂಡಿದೆ. ಪ್ರಕರಣದ ಆರೋಪಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್  ಅವರನ್ನು ಎನ್‌ಕೌಂಟರ್‌ ಮಾಡಲಾಗಿದೆ.

ಝಾನ್ಸಿಯಲ್ಲಿ ಅತಿಕ್‌ ಪುತ್ರ  ಅಸದ್ ಮತ್ತು ಶೂಟರ್ ಗುಲಾಮ್‌ ನನ್ನು ಎನ್‌ಕೌಂಟರ್ ಮಾಡಲಾಗಿದೆ. ಎನ್‌ಕೌಂಟರ್‌ನಲ್ಲಿ ಅಸದ್ ಮತ್ತು ಶೂಟರ್ ಗುಲಾಮ್ ಸಾವನ್ನಪ್ಪಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಇಬ್ಬರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು.

ಅಸದ್-ಗುಲಾಮ್  ಇಬ್ಬರ ಪತ್ತೆಗೆ 5-5 ಲಕ್ಷ ಬಹುಮಾನ ಘೋಷಿಸಲಾಗಿತ್ತು  : 
ಉಮೇಶ್‌ ಪಾಲ್‌ ಹತ್ಯೆ ಪ್ರಕರಣದಲ್ಲಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್ ಇಬ್ಬರೂ ಆರೋಪಿಗಳಾಗಿದ್ದರು.  ಇಬ್ಬರ ಪತ್ತೆಗೆ 5 ಲಕ್ಷ ರೂಪಾಯಿ ಬಹುಮಾನ ಕೂಡಾ ಘೋಷಿಸಲಾಗಿತ್ತು.  ಇದೀಗ ಯುಪಿ ಎಸ್‌ಟಿಎಫ್ ಡೆಪ್ಯುಟಿ ಎಸ್‌ಪಿ ನಾವೆಂದು ಮತ್ತು ಡೆಪ್ಯೂಟಿ ಎಸ್‌ಪಿ ವಿಮಲ್ ನೇತೃತ್ವದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರೂ ಹತರಾಗಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಿಂದ  ವಿದೇಶಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

andolanait

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

12 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

13 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

13 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

13 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

13 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

13 hours ago