BREAKING NEWS

ಉಮೇಶ್ ಪಾಲ್ ಹತ್ಯೆ ಪ್ರಕರಣ : ಅತೀಕ್ ಅಹ್ಮದ್ ಪುತ್ರ ಅಸದ್ ಎನ್ ಕೌಂಟರ್

ಉತ್ತರ ಪ್ರದೇಶ: ಉಮೇಶ್ ಪಾಲ್ ಮರ್ಡರ್ ಪ್ರಕರಣದ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದ ಯುಪಿ ಎಸ್‌ಟಿಎಫ್ ತಂಡ ಭರ್ಜರಿ ಯಶಸ್ಸು ಕಂಡಿದೆ. ಪ್ರಕರಣದ ಆರೋಪಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್  ಅವರನ್ನು ಎನ್‌ಕೌಂಟರ್‌ ಮಾಡಲಾಗಿದೆ.

ಝಾನ್ಸಿಯಲ್ಲಿ ಅತಿಕ್‌ ಪುತ್ರ  ಅಸದ್ ಮತ್ತು ಶೂಟರ್ ಗುಲಾಮ್‌ ನನ್ನು ಎನ್‌ಕೌಂಟರ್ ಮಾಡಲಾಗಿದೆ. ಎನ್‌ಕೌಂಟರ್‌ನಲ್ಲಿ ಅಸದ್ ಮತ್ತು ಶೂಟರ್ ಗುಲಾಮ್ ಸಾವನ್ನಪ್ಪಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಇಬ್ಬರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು.

ಅಸದ್-ಗುಲಾಮ್  ಇಬ್ಬರ ಪತ್ತೆಗೆ 5-5 ಲಕ್ಷ ಬಹುಮಾನ ಘೋಷಿಸಲಾಗಿತ್ತು  : 
ಉಮೇಶ್‌ ಪಾಲ್‌ ಹತ್ಯೆ ಪ್ರಕರಣದಲ್ಲಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್ ಇಬ್ಬರೂ ಆರೋಪಿಗಳಾಗಿದ್ದರು.  ಇಬ್ಬರ ಪತ್ತೆಗೆ 5 ಲಕ್ಷ ರೂಪಾಯಿ ಬಹುಮಾನ ಕೂಡಾ ಘೋಷಿಸಲಾಗಿತ್ತು.  ಇದೀಗ ಯುಪಿ ಎಸ್‌ಟಿಎಫ್ ಡೆಪ್ಯುಟಿ ಎಸ್‌ಪಿ ನಾವೆಂದು ಮತ್ತು ಡೆಪ್ಯೂಟಿ ಎಸ್‌ಪಿ ವಿಮಲ್ ನೇತೃತ್ವದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರೂ ಹತರಾಗಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಿಂದ  ವಿದೇಶಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

andolanait

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

3 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

3 hours ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

3 hours ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

3 hours ago