BREAKING NEWS

ಉಮೇಶ್ ಪಾಲ್ ಹತ್ಯೆ ಪ್ರಕರಣ : ಅತೀಕ್ ಅಹ್ಮದ್ ಪುತ್ರ ಅಸದ್ ಎನ್ ಕೌಂಟರ್

ಉತ್ತರ ಪ್ರದೇಶ: ಉಮೇಶ್ ಪಾಲ್ ಮರ್ಡರ್ ಪ್ರಕರಣದ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದ ಯುಪಿ ಎಸ್‌ಟಿಎಫ್ ತಂಡ ಭರ್ಜರಿ ಯಶಸ್ಸು ಕಂಡಿದೆ. ಪ್ರಕರಣದ ಆರೋಪಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್  ಅವರನ್ನು ಎನ್‌ಕೌಂಟರ್‌ ಮಾಡಲಾಗಿದೆ.

ಝಾನ್ಸಿಯಲ್ಲಿ ಅತಿಕ್‌ ಪುತ್ರ  ಅಸದ್ ಮತ್ತು ಶೂಟರ್ ಗುಲಾಮ್‌ ನನ್ನು ಎನ್‌ಕೌಂಟರ್ ಮಾಡಲಾಗಿದೆ. ಎನ್‌ಕೌಂಟರ್‌ನಲ್ಲಿ ಅಸದ್ ಮತ್ತು ಶೂಟರ್ ಗುಲಾಮ್ ಸಾವನ್ನಪ್ಪಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಇಬ್ಬರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು.

ಅಸದ್-ಗುಲಾಮ್  ಇಬ್ಬರ ಪತ್ತೆಗೆ 5-5 ಲಕ್ಷ ಬಹುಮಾನ ಘೋಷಿಸಲಾಗಿತ್ತು  : 
ಉಮೇಶ್‌ ಪಾಲ್‌ ಹತ್ಯೆ ಪ್ರಕರಣದಲ್ಲಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್ ಇಬ್ಬರೂ ಆರೋಪಿಗಳಾಗಿದ್ದರು.  ಇಬ್ಬರ ಪತ್ತೆಗೆ 5 ಲಕ್ಷ ರೂಪಾಯಿ ಬಹುಮಾನ ಕೂಡಾ ಘೋಷಿಸಲಾಗಿತ್ತು.  ಇದೀಗ ಯುಪಿ ಎಸ್‌ಟಿಎಫ್ ಡೆಪ್ಯುಟಿ ಎಸ್‌ಪಿ ನಾವೆಂದು ಮತ್ತು ಡೆಪ್ಯೂಟಿ ಎಸ್‌ಪಿ ವಿಮಲ್ ನೇತೃತ್ವದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರೂ ಹತರಾಗಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಿಂದ  ವಿದೇಶಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

11 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago