ಹೈದರಾಬಾದ್ : ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ವೈಎಸ್ಆರ್ ತೆಲಂಗಾಣ ಪಾರ್ಟಿ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಇಂದು ಘೋಷಿಸಿದ್ದಾರೆ. ರಾಜ್ಯದ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಸರಕಾರವನ್ನು ಸೋಲಿಸಲು ಈ ನಿರ್ಧಾರ ಕೈಗೊಂಡು ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ಘೋಷಿಸುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ.
ಆಂಧ್ರ ಪ್ರದೇಶದ ಮಾಜಿ ಸಿಎಂ ಆಗಿದ್ದ ದಿವಂಗತ ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿರುವ ಶರ್ಮಿಳಾ, ತಮಗೆ ಆಡಳಿತ ಭಾರತ್ ರಾಷ್ಟ್ರ ಸಮಿತಿಯ ವಿರುದ್ಧದ ಮತ ಹಂಚಿ ಹೋಗುವುದು ಬೇಕಿಲ್ಲ ಎಂದಿದ್ದಾರೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ಸೋದರಿಯೂ ಆಗಿರುವ ಶರ್ಮಿಳಾ ತೆಲಂಗಾಣದಲ್ಲಿ ಕೆಸಿಆರ್ ವಿರೋಧಿ ಅಲೆ ಇದೆ ಎಂದು ಹೇಳಿದರು.
ತೆಲಂಗಾಣ ಜನರ ಹಿತದೃಷ್ಟಿಯಿಂದ ತಾವು ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ ಶರ್ಮಿಳಾ “ನಾನು ತಪ್ಪು ನಿರ್ಧಾರ ಕೈಗೊಂಡಿದ್ದೇನೆ ಎಂದು ನಿಮಗನಿಸಿದ್ದರೆ ವೈಎಸ್ಆರ್ಟಿಪಿ ನಾಯಕಿಯಾಗಿ ಹಾಗೂ ವೈಎಸ್ಆರ್ ಮಗಳಾಗಿ ನಿಮ್ಮಿಂದ ಕ್ಷಮೆಯಾಚಿಸುತ್ತೇನೆ,” ಎಂದು ಅವರು ಹೇಳಿದರು.
ಕಾಂಗ್ರೆಸ್ ಜೊತೆಗೆ ವಿಲೀನಗೊಳ್ಳುವ ನಿಟ್ಟಿನಲ್ಲಿ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಶರ್ಮಿಳಾ ಹೇಳಿಕೆ ನೀಡಿ ತಮ್ಮ ಪಕ್ಷ ವಿಧಾನಸಭಾ ಚುನಾವಣೆ ಸ್ಪರ್ಧಿಸಲಿದೆ ಎಂದು ತಿಳಿಸಿದ್ದರು.
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ…
ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…
ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ…
ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…