BREAKING NEWS

ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೇಷರತ್‌ ಬೆಂಬಲ: ವೈಎಸ್‌ಆರ್‌ಟಿಪಿ ಅಧ್ಯಕ್ಷೆ ಶರ್ಮಿಳಾ

ಹೈದರಾಬಾದ್ :‌ ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ವೈಎಸ್‌ಆರ್‌ ತೆಲಂಗಾಣ ಪಾರ್ಟಿ ಅಧ್ಯಕ್ಷೆ ವೈ ಎಸ್‌ ಶರ್ಮಿಳಾ ಇಂದು ಘೋಷಿಸಿದ್ದಾರೆ. ರಾಜ್ಯದ ಕೆ. ಚಂದ್ರಶೇಖರ್‌ ರಾವ್‌ ನೇತೃತ್ವದ ಸರಕಾರವನ್ನು ಸೋಲಿಸಲು ಈ ನಿರ್ಧಾರ ಕೈಗೊಂಡು ಕಾಂಗ್ರೆಸ್‌ ಪಕ್ಷಕ್ಕೆ ಬೇಷರತ್‌ ಬೆಂಬಲ ಘೋಷಿಸುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ.

ಆಂಧ್ರ ಪ್ರದೇಶದ ಮಾಜಿ ಸಿಎಂ ಆಗಿದ್ದ ದಿವಂಗತ ವೈ ಎಸ್‌ ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿರುವ ಶರ್ಮಿಳಾ, ತಮಗೆ ಆಡಳಿತ ಭಾರತ್‌ ರಾಷ್ಟ್ರ ಸಮಿತಿಯ ವಿರುದ್ಧದ ಮತ ಹಂಚಿ ಹೋಗುವುದು ಬೇಕಿಲ್ಲ ಎಂದಿದ್ದಾರೆ.

ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್‌ ಜಗನ್‌ಮೋಹನ್‌ ರೆಡ್ಡಿ ಅವರ ಸೋದರಿಯೂ ಆಗಿರುವ ಶರ್ಮಿಳಾ ತೆಲಂಗಾಣದಲ್ಲಿ ಕೆಸಿಆರ್‌ ವಿರೋಧಿ ಅಲೆ ಇದೆ ಎಂದು ಹೇಳಿದರು.

ತೆಲಂಗಾಣ ಜನರ ಹಿತದೃಷ್ಟಿಯಿಂದ ತಾವು ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ ಶರ್ಮಿಳಾ “ನಾನು ತಪ್ಪು ನಿರ್ಧಾರ ಕೈಗೊಂಡಿದ್ದೇನೆ ಎಂದು ನಿಮಗನಿಸಿದ್ದರೆ ವೈಎಸ್‌ಆರ್‌ಟಿಪಿ ನಾಯಕಿಯಾಗಿ ಹಾಗೂ ವೈಎಸ್‌ಆರ್‌ ಮಗಳಾಗಿ ನಿಮ್ಮಿಂದ ಕ್ಷಮೆಯಾಚಿಸುತ್ತೇನೆ,” ಎಂದು ಅವರು ಹೇಳಿದರು.

ಕಾಂಗ್ರೆಸ್‌ ಜೊತೆಗೆ ವಿಲೀನಗೊಳ್ಳುವ ನಿಟ್ಟಿನಲ್ಲಿ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಶರ್ಮಿಳಾ ಹೇಳಿಕೆ ನೀಡಿ ತಮ್ಮ ಪಕ್ಷ ವಿಧಾನಸಭಾ ಚುನಾವಣೆ ಸ್ಪರ್ಧಿಸಲಿದೆ ಎಂದು ತಿಳಿಸಿದ್ದರು.

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

5 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

8 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

9 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

9 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

9 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

9 hours ago