ಹೈದರಾಬಾದ್ : ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ವೈಎಸ್ಆರ್ ತೆಲಂಗಾಣ ಪಾರ್ಟಿ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಇಂದು ಘೋಷಿಸಿದ್ದಾರೆ. ರಾಜ್ಯದ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಸರಕಾರವನ್ನು ಸೋಲಿಸಲು ಈ ನಿರ್ಧಾರ ಕೈಗೊಂಡು ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ಘೋಷಿಸುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ.
ಆಂಧ್ರ ಪ್ರದೇಶದ ಮಾಜಿ ಸಿಎಂ ಆಗಿದ್ದ ದಿವಂಗತ ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿರುವ ಶರ್ಮಿಳಾ, ತಮಗೆ ಆಡಳಿತ ಭಾರತ್ ರಾಷ್ಟ್ರ ಸಮಿತಿಯ ವಿರುದ್ಧದ ಮತ ಹಂಚಿ ಹೋಗುವುದು ಬೇಕಿಲ್ಲ ಎಂದಿದ್ದಾರೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ಸೋದರಿಯೂ ಆಗಿರುವ ಶರ್ಮಿಳಾ ತೆಲಂಗಾಣದಲ್ಲಿ ಕೆಸಿಆರ್ ವಿರೋಧಿ ಅಲೆ ಇದೆ ಎಂದು ಹೇಳಿದರು.
ತೆಲಂಗಾಣ ಜನರ ಹಿತದೃಷ್ಟಿಯಿಂದ ತಾವು ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ ಶರ್ಮಿಳಾ “ನಾನು ತಪ್ಪು ನಿರ್ಧಾರ ಕೈಗೊಂಡಿದ್ದೇನೆ ಎಂದು ನಿಮಗನಿಸಿದ್ದರೆ ವೈಎಸ್ಆರ್ಟಿಪಿ ನಾಯಕಿಯಾಗಿ ಹಾಗೂ ವೈಎಸ್ಆರ್ ಮಗಳಾಗಿ ನಿಮ್ಮಿಂದ ಕ್ಷಮೆಯಾಚಿಸುತ್ತೇನೆ,” ಎಂದು ಅವರು ಹೇಳಿದರು.
ಕಾಂಗ್ರೆಸ್ ಜೊತೆಗೆ ವಿಲೀನಗೊಳ್ಳುವ ನಿಟ್ಟಿನಲ್ಲಿ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಶರ್ಮಿಳಾ ಹೇಳಿಕೆ ನೀಡಿ ತಮ್ಮ ಪಕ್ಷ ವಿಧಾನಸಭಾ ಚುನಾವಣೆ ಸ್ಪರ್ಧಿಸಲಿದೆ ಎಂದು ತಿಳಿಸಿದ್ದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…