ಹೈದರಾಬಾದ್ : ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ವೈಎಸ್ಆರ್ ತೆಲಂಗಾಣ ಪಾರ್ಟಿ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಇಂದು ಘೋಷಿಸಿದ್ದಾರೆ. ರಾಜ್ಯದ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಸರಕಾರವನ್ನು ಸೋಲಿಸಲು ಈ ನಿರ್ಧಾರ ಕೈಗೊಂಡು ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ಘೋಷಿಸುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ.
ಆಂಧ್ರ ಪ್ರದೇಶದ ಮಾಜಿ ಸಿಎಂ ಆಗಿದ್ದ ದಿವಂಗತ ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿರುವ ಶರ್ಮಿಳಾ, ತಮಗೆ ಆಡಳಿತ ಭಾರತ್ ರಾಷ್ಟ್ರ ಸಮಿತಿಯ ವಿರುದ್ಧದ ಮತ ಹಂಚಿ ಹೋಗುವುದು ಬೇಕಿಲ್ಲ ಎಂದಿದ್ದಾರೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ಸೋದರಿಯೂ ಆಗಿರುವ ಶರ್ಮಿಳಾ ತೆಲಂಗಾಣದಲ್ಲಿ ಕೆಸಿಆರ್ ವಿರೋಧಿ ಅಲೆ ಇದೆ ಎಂದು ಹೇಳಿದರು.
ತೆಲಂಗಾಣ ಜನರ ಹಿತದೃಷ್ಟಿಯಿಂದ ತಾವು ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ ಶರ್ಮಿಳಾ “ನಾನು ತಪ್ಪು ನಿರ್ಧಾರ ಕೈಗೊಂಡಿದ್ದೇನೆ ಎಂದು ನಿಮಗನಿಸಿದ್ದರೆ ವೈಎಸ್ಆರ್ಟಿಪಿ ನಾಯಕಿಯಾಗಿ ಹಾಗೂ ವೈಎಸ್ಆರ್ ಮಗಳಾಗಿ ನಿಮ್ಮಿಂದ ಕ್ಷಮೆಯಾಚಿಸುತ್ತೇನೆ,” ಎಂದು ಅವರು ಹೇಳಿದರು.
ಕಾಂಗ್ರೆಸ್ ಜೊತೆಗೆ ವಿಲೀನಗೊಳ್ಳುವ ನಿಟ್ಟಿನಲ್ಲಿ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಶರ್ಮಿಳಾ ಹೇಳಿಕೆ ನೀಡಿ ತಮ್ಮ ಪಕ್ಷ ವಿಧಾನಸಭಾ ಚುನಾವಣೆ ಸ್ಪರ್ಧಿಸಲಿದೆ ಎಂದು ತಿಳಿಸಿದ್ದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…