BREAKING NEWS

Under 19 Worldcup 2024: ಸೆಮಿಫೈನಲ್‌ ಪ್ರವೇಶಿಸಿದ ಭಾರತ

ದಕ್ಷಿಣ ಆಫ್ರಿಕಾದ ಮಾಂಗ್ವಾಂಗ್ ಓವಲ್ ಕ್ರೀಡಾಂಗಣದಲ್ಲಿ ಭಾರತ ಅಂಡರ್ 19 ತಂಡ ಸೂಪರ್ ಸಿಕ್ಸ್ ಸುತ್ತಿನ ತಮ್ಮ ಎರಡನೇ ಪಂದ್ಯದಲ್ಲಿ ನೇಪಾಳ ಅಂಡರ್ 19 ತಂಡವನ್ನು 132 ರನ್‌ಗಳ ಅಂತರದಿಂದ ಸೋಲಿಸಿ ಸೆಮಿಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಮಂಗಳವಾರ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಜತೆ ಸೆಣಸಾಡಲಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 50 ಓವರ್‌ಗಳಲ್ಲಿ ನಾಯಕ ಉದಯ್ ಸಹರಣ್ ಹಾಗೂ ಸಚಿನ್ ದಾಸ್ ಶತಕಗಳ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 297 ರನ್ ಕಲೆಹಾಕಿ ನೇಪಾಳ ತಂಡಕ್ಕೆ ಗೆಲ್ಲಲು 298 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ನೇಪಾಳ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ‌ 165 ರನ್ ಗಳಿಸಿತು‌.

 

ಭಾರತದ ಇನ್ನಿಂಗ್ಸ್: ಆದರ್ಶ್ ಸಿಂಗ್ 21, ಅರ್ಶಿನ್ ಕುಲ್ಕರ್ಣಿ 18, ಪ್ರಿಯಂಶು ಮೊಳಿಯ 19, ಉದಯ್ ಸಹರಣ್ 100, ಸಚಿನ್ ದಾಸ್ 116, ಮುಶೀರ್ ಖಾನ್ ಅಜೇಯ 9 ರನ್ ಹಾಗೂ ಅರವೆಳ್ಳಿ ಅವಿನಾಶ್ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.

ನೇಪಾಳದ ಪರ ಗುಲ್ಶಾನ್ ಝಾ 3 ವಿಕೆಟ್ ಹಾಗೂ ಆಕಾಶ್ ಚಂದ್ 1 ವಿಕೆಟ್ ಪಡೆದರು.

ನೇಪಾಳ ಇನ್ನಿಂಗ್ಸ್: ದೀಪಕ್ ಬೊಹಾರ 22, ಅರ್ಜುನ್ ಕುಮಾಲ್ 26, ಉತ್ತಮ್ ಮಗರ್ 8, ದೇವ್ ಖನಲ್ 33, ಬಿಶಾಲ್ ಬಿಕ್ರಮ್ 1, ದೀಪಕ್ ದುಮ್ರೆ ೦, ಗುಲ್ಶಾನ್ ಝಾ 1, ದೀಪೇಶ್ ಕಂಡೆಲ್ 0, ಸುಭಾಷ್ ಭಂಡಾರಿ 5, ಆಕಾಶ್ ಚಾಂದ್ ಅಜೇಯ 19 ಹಾಗೂ ದುರ್ಗೇಶ್ ಗುಪ್ತಾ ಅಜೇಯ 29 ರನ್ ಗಳಿಸಿದರು.

ಭಾರತದ ಪರ ಸೌಮಿ ಪಾಂಡೆ 4 ವಿಕೆಟ್, ಅರ್ಶಿನ್ 2 ವಿಕೆಟ್, ರಾಜ್ ಲಿಂಬಾಣಿ, ಆರಾಧ್ಯ ಶುಕ್ಲಾ ಹಾಗೂ ಮುರುಗನ್ ಅಭಿಷೇಕ್ ತಲಾ ಒಂದೊಂದು ವಿಕೆಟ್ ಪಡೆದರು.

andolana

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

4 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

4 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

6 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

8 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

10 hours ago