ದಕ್ಷಿಣ ಆಫ್ರಿಕಾದ ಮಾಂಗ್ವಾಂಗ್ ಓವಲ್ ಕ್ರೀಡಾಂಗಣದಲ್ಲಿ ಭಾರತ ಅಂಡರ್ 19 ತಂಡ ಸೂಪರ್ ಸಿಕ್ಸ್ ಸುತ್ತಿನ ತಮ್ಮ ಎರಡನೇ ಪಂದ್ಯದಲ್ಲಿ ನೇಪಾಳ ಅಂಡರ್ 19 ತಂಡವನ್ನು 132 ರನ್ಗಳ ಅಂತರದಿಂದ ಸೋಲಿಸಿ ಸೆಮಿಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಮಂಗಳವಾರ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಜತೆ ಸೆಣಸಾಡಲಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 50 ಓವರ್ಗಳಲ್ಲಿ ನಾಯಕ ಉದಯ್ ಸಹರಣ್ ಹಾಗೂ ಸಚಿನ್ ದಾಸ್ ಶತಕಗಳ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 297 ರನ್ ಕಲೆಹಾಕಿ ನೇಪಾಳ ತಂಡಕ್ಕೆ ಗೆಲ್ಲಲು 298 ರನ್ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ನೇಪಾಳ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 165 ರನ್ ಗಳಿಸಿತು.
ಭಾರತದ ಇನ್ನಿಂಗ್ಸ್: ಆದರ್ಶ್ ಸಿಂಗ್ 21, ಅರ್ಶಿನ್ ಕುಲ್ಕರ್ಣಿ 18, ಪ್ರಿಯಂಶು ಮೊಳಿಯ 19, ಉದಯ್ ಸಹರಣ್ 100, ಸಚಿನ್ ದಾಸ್ 116, ಮುಶೀರ್ ಖಾನ್ ಅಜೇಯ 9 ರನ್ ಹಾಗೂ ಅರವೆಳ್ಳಿ ಅವಿನಾಶ್ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ನೇಪಾಳದ ಪರ ಗುಲ್ಶಾನ್ ಝಾ 3 ವಿಕೆಟ್ ಹಾಗೂ ಆಕಾಶ್ ಚಂದ್ 1 ವಿಕೆಟ್ ಪಡೆದರು.
ನೇಪಾಳ ಇನ್ನಿಂಗ್ಸ್: ದೀಪಕ್ ಬೊಹಾರ 22, ಅರ್ಜುನ್ ಕುಮಾಲ್ 26, ಉತ್ತಮ್ ಮಗರ್ 8, ದೇವ್ ಖನಲ್ 33, ಬಿಶಾಲ್ ಬಿಕ್ರಮ್ 1, ದೀಪಕ್ ದುಮ್ರೆ ೦, ಗುಲ್ಶಾನ್ ಝಾ 1, ದೀಪೇಶ್ ಕಂಡೆಲ್ 0, ಸುಭಾಷ್ ಭಂಡಾರಿ 5, ಆಕಾಶ್ ಚಾಂದ್ ಅಜೇಯ 19 ಹಾಗೂ ದುರ್ಗೇಶ್ ಗುಪ್ತಾ ಅಜೇಯ 29 ರನ್ ಗಳಿಸಿದರು.
ಭಾರತದ ಪರ ಸೌಮಿ ಪಾಂಡೆ 4 ವಿಕೆಟ್, ಅರ್ಶಿನ್ 2 ವಿಕೆಟ್, ರಾಜ್ ಲಿಂಬಾಣಿ, ಆರಾಧ್ಯ ಶುಕ್ಲಾ ಹಾಗೂ ಮುರುಗನ್ ಅಭಿಷೇಕ್ ತಲಾ ಒಂದೊಂದು ವಿಕೆಟ್ ಪಡೆದರು.
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…