BREAKING NEWS

Under 19 Worldcup 2024 Final: ಭಾರತ ಮಣಿಸಿ ಚಾಂಪಿಯನ್‌ ಆದ ಆಸ್ಟ್ರೇಲಿಯಾ

ಜನವರಿ 19ರಂದು ಆರಂಭವಾಗಿದ್ದ ಐಸಿಸಿ ಅಂಡರ್‌ 19 ವಿಶ್ವಕಪ್‌ ಟೂರ್ನಿಗೆ ತೆರೆಬಿದ್ದಿದ್ದು, ಇಂದು ( ಫೆಬ್ರವರಿ 11 ) ನಡೆದ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತ ತಂಡವನ್ನು 79 ರನ್‌ಗಳಿಂದ ಸೋಲಿಸಿ ಚಾಂಪಿಯನ್‌ ಪಟ್ಟಕ್ಕೇರಿದೆ.

ದಕ್ಷಿಣ ಆಫ್ರಿಕಾದ ಬೆನೊನಿಯ ವಿಲ್ಲೋಮೋರ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 253 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 254 ರನ್‌ಗಳ ಸವಾಲಿನ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಟೀಮ್‌ ಇಂಡಿಯಾ 43.5 ಓವರ್‌ಗಳಲ್ಲಿ 174 ರನ್‌ಗಳಿಗೆ ಆಲ್‌ಔಟ್‌ ಆಗಿದೆ.

ಭಾರತದ ಪರ ಆರಂಭಿಕ ಆಟಗಾರ ಆದರ್ಶ್‌ ಸಿಂಗ್‌ ಹಾಗೂ ಮುರುಗನ್‌ ಅಭಿಷೇಕ್‌ ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸ್‌ಮನ್‌ ಸಹ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಕಳೆದ ಪಂದ್ಯಗಳಲ್ಲಿ ಉತ್ತಮ ಆಟವನ್ನಾಡಿದ್ದ ನಾಯಕ ಉದಯ್‌ ಸಹರಣ್‌ ಹಾಗೂ ಸಚಿನ್‌ ದಾಸ್‌ ಈ ಪಂದ್ಯದಲ್ಲಿ ಎರಡಂಕಿ ಮುಟ್ಟುವಲ್ಲಿಯೂ ಯಶಸ್ವಿಯಾಗಲಿಲ್ಲ.

ಆದರ್ಶ್‌ ಸಿಂಗ್‌ 47, ಅರ್ಶಿನ್‌ ಕುಲ್ಕರ್ಣಿ 3, ಮುಶೀರ್‌ ಖಾನ್‌ 22, ಉದಯ್‌ ಸಹರಣ್‌ 8, ಸಚಿನ್‌ ದಾಸ್‌ 9, ಪ್ರಿಯಂಶು ಮೊಲಿಯಾ 9, ಅವಿನಾಶ್‌ ಅರವೆಳ್ಳಿ ಡಕ್‌ಔಟ್‌, ಮುರುಗನ್‌ ಅಭಿಷೇಕ್‌ 42, ರಾಜ್‌ ಲಿಂಬಾನಿ ಡಕ್‌ಔಟ್‌, ನಮನ್‌ ತಿವಾರಿ ಅಜೇಯ 14 ರನ್‌ ಹಾಗೂ ಸೌಮಿ ಪಾಂಡೆ 2 ರನ್‌ ಗಳಿಸಿದರು.

ಆಸ್ಟ್ರೇಲಿಯಾ ಪರ ಮಲಿ ಬಿಯರ್ಡ್‌ಮನ್‌ ಹಾಗೂ ರಾಫ್‌ ಮೆಕ್‌ಮಿಲನ್‌ ತಲಾ 3 ವಿಕೆಟ್‌ ಪಡೆದರೆ, ಕ್ಯಾಲಂ ವಿಡ್ಲೆರ್‌ 2 ವಿಕೆಟ್‌, ಚಾರ್ಲಿ ಆಂಡರ್‌ಸನ್‌ ಹಾಗೂ ಟಾಮ್‌ ಸ್ಟಾರ್ಕರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

6 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago