BREAKING NEWS

Under 19 Worldcup 2024 Final: ಭಾರತ ಮಣಿಸಿ ಚಾಂಪಿಯನ್‌ ಆದ ಆಸ್ಟ್ರೇಲಿಯಾ

ಜನವರಿ 19ರಂದು ಆರಂಭವಾಗಿದ್ದ ಐಸಿಸಿ ಅಂಡರ್‌ 19 ವಿಶ್ವಕಪ್‌ ಟೂರ್ನಿಗೆ ತೆರೆಬಿದ್ದಿದ್ದು, ಇಂದು ( ಫೆಬ್ರವರಿ 11 ) ನಡೆದ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತ ತಂಡವನ್ನು 79 ರನ್‌ಗಳಿಂದ ಸೋಲಿಸಿ ಚಾಂಪಿಯನ್‌ ಪಟ್ಟಕ್ಕೇರಿದೆ.

ದಕ್ಷಿಣ ಆಫ್ರಿಕಾದ ಬೆನೊನಿಯ ವಿಲ್ಲೋಮೋರ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 253 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 254 ರನ್‌ಗಳ ಸವಾಲಿನ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಟೀಮ್‌ ಇಂಡಿಯಾ 43.5 ಓವರ್‌ಗಳಲ್ಲಿ 174 ರನ್‌ಗಳಿಗೆ ಆಲ್‌ಔಟ್‌ ಆಗಿದೆ.

ಭಾರತದ ಪರ ಆರಂಭಿಕ ಆಟಗಾರ ಆದರ್ಶ್‌ ಸಿಂಗ್‌ ಹಾಗೂ ಮುರುಗನ್‌ ಅಭಿಷೇಕ್‌ ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸ್‌ಮನ್‌ ಸಹ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಕಳೆದ ಪಂದ್ಯಗಳಲ್ಲಿ ಉತ್ತಮ ಆಟವನ್ನಾಡಿದ್ದ ನಾಯಕ ಉದಯ್‌ ಸಹರಣ್‌ ಹಾಗೂ ಸಚಿನ್‌ ದಾಸ್‌ ಈ ಪಂದ್ಯದಲ್ಲಿ ಎರಡಂಕಿ ಮುಟ್ಟುವಲ್ಲಿಯೂ ಯಶಸ್ವಿಯಾಗಲಿಲ್ಲ.

ಆದರ್ಶ್‌ ಸಿಂಗ್‌ 47, ಅರ್ಶಿನ್‌ ಕುಲ್ಕರ್ಣಿ 3, ಮುಶೀರ್‌ ಖಾನ್‌ 22, ಉದಯ್‌ ಸಹರಣ್‌ 8, ಸಚಿನ್‌ ದಾಸ್‌ 9, ಪ್ರಿಯಂಶು ಮೊಲಿಯಾ 9, ಅವಿನಾಶ್‌ ಅರವೆಳ್ಳಿ ಡಕ್‌ಔಟ್‌, ಮುರುಗನ್‌ ಅಭಿಷೇಕ್‌ 42, ರಾಜ್‌ ಲಿಂಬಾನಿ ಡಕ್‌ಔಟ್‌, ನಮನ್‌ ತಿವಾರಿ ಅಜೇಯ 14 ರನ್‌ ಹಾಗೂ ಸೌಮಿ ಪಾಂಡೆ 2 ರನ್‌ ಗಳಿಸಿದರು.

ಆಸ್ಟ್ರೇಲಿಯಾ ಪರ ಮಲಿ ಬಿಯರ್ಡ್‌ಮನ್‌ ಹಾಗೂ ರಾಫ್‌ ಮೆಕ್‌ಮಿಲನ್‌ ತಲಾ 3 ವಿಕೆಟ್‌ ಪಡೆದರೆ, ಕ್ಯಾಲಂ ವಿಡ್ಲೆರ್‌ 2 ವಿಕೆಟ್‌, ಚಾರ್ಲಿ ಆಂಡರ್‌ಸನ್‌ ಹಾಗೂ ಟಾಮ್‌ ಸ್ಟಾರ್ಕರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago