BREAKING NEWS

Under 19 Worldcup Final: ಭಾರತಕ್ಕೆ 254 ರನ್‌ಗಳ ಗುರಿ ನೀಡಿದ ಆಸ್ಟ್ರೇಲಿಯಾ

ದಕ್ಷಿಣ ಆಫ್ರಿಕಾದ ಬೆನೊನಿಯ ವಿಲ್ಲೋಮೋರ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 253 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 254 ರನ್‌ಗಳ ಸವಾಲಿನ ಗುರಿ ನೀಡಿದೆ.

16 ರನ್‌ಗಳಿಗೆ ತನ್ನ ಮೊದಲ ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದ ಆಸ್ಟ್ರೇಲಿಯಾ ತಂಡ ನಂತರ ಕಣಕ್ಕಿಳಿದ ಆಟಗಾರರ ಜವಾಬ್ದಾರಿಯುತ ಆಟದ ನೆರವಿನಿಂದ ಪೈಪೋಟಿಯುತ ರನ್‌ ಕಲೆಹಾಕಿತು. ತಂಡದ ಪರ ಹ್ಯಾರಿ ಡಿಕ್ಸನ್‌ 42, ಸ್ಯಾಮನ್‌ ಕೊನ್‌ಸ್ಟಾಸ್‌ ಡಕ್‌ಔಟ್‌, ನಾಯಕ ಹ್ಯೂ ವಿಬ್‌ಜೆನ್‌ 48, ಹರ್ಜಸ್‌ ಸಿಂಗ್‌ 55, ರ್ಯಾನ್‌ ಹಿಕ್ಸ್‌ 20, ರಾಫ್‌ ಮೆಕ್‌ಮಿಲನ್‌ 2, ಚಾರ್ಲಿ ಆಂಡರ್‌ಸನ್‌ 13, ಟಾಮ್‌ ಸ್ಟಾರ್ಕರ್‌ ಅಜೇಯ 8 ಹಾಗೂ ಓಲಿವರ್‌ ಪೀಕ್‌ ಅಜೇಯ 46 ರನ್‌ ಗಳಿಸಿದರು.

ಭಾರತದ ಪರ ರಾಜ್‌ ಲಿಂಬಾನಿ 3 ವಿಕೆಟ್‌, ನಮನ್‌ ತಿವಾರಿ 2, ಸೌಮಿ ಪಾಂಡೆ ಹಾಗೂ ಮುಶೀರ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

53 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago