ನಿನ್ನೆಯಿಂದ ( ಜನವರಿ 19 ) ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಿದ್ದು, ಇಂದು ( ಜನವರಿ 20 ) ನಡೆದ ಟೂರ್ನಿಯ ಮೂರನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದವು. ಬ್ಲೂಮ್ಫಾಂಟಿನ್ನ ಮಾಂಗೌಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡ 84 ರನ್ಗಳ ಭರ್ಜರಿ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿ ಬಾಂಗ್ಲಾದೇಶ ತಂಡಕ್ಕೆ ಗೆಲ್ಲಲು 252 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಬಾಂಗ್ಲಾದೇಶ 45.5 ಓವರ್ಗಳಲ್ಲಿ 167 ರನ್ಗಳಿಗೆ ಆಲ್ಔಟ್ ಆಗಿದೆ.
ಭಾರತದ ಇನ್ನಿಂಗ್ಸ್: ಆರಂಭಿಕನಾಗಿ ಕಣಕ್ಕಿಳಿದು ಉತ್ತಮ ಪ್ರದರ್ಶನ ನೀಡಿದ ಆದರ್ಶ್ ಸಿಂಗ್ 76 ರನ್, ಅರ್ಷಿನ್ ಕುಲ್ಕರ್ಣಿ 7, ಮುಷೀರ್ ಖಾನ್ 3, ನಾಯಕ ಉದಯ್ ಸಹರಣ್ 64, ಪ್ರಿಯಂಶು ಮೊಲಿಯಾ 23, ಅರವೆಲ್ಲಿ ಅವಿನಾಶ್ 23, ಮುರುಗನ್ ಅಭಿಷೇಕ್ 4, ರಾಜ್ ಲಿಂಬಾನಿ ಅಜೇಯ 2 ಹಾಗೂ ಸಚಿನ್ ದಾಸ್ ಅಜೇಯ 26 ರನ್ ಗಳಿಸಿದರು.
ಬಾಂಗ್ಲಾದೇಶದ ಪರ ಮರುಫ್ ಮೃಧಾ 5 ವಿಕೆಟ್, ಚೌಧುರಿ ಮೊಹಮ್ಮದ್ ರಿಜ್ವಾನ್ ಹಾಗೂ ಮಹ್ಫಜುರ್ ರಹಮಾನ್ ರಾಬ್ಬಿ ತಲಾ ಒಂದೊಂದು ವಿಕೆಟ್ ಪಡೆದರು.
ಬಾಂಗ್ಲಾದೇಶ ಇನ್ನಿಂಗ್ಸ್: ಆಶಿಖುರ್ ರಹಮಾನ್ ಶಿಬ್ಲಿ 14, ಜಿಶನ್ ಅಲಮ್ 14, ಚೌಧುರಿ ಮೊಹಮ್ಮದ್ ರಿಜ್ವಾನ್ ಡಕ್ಔಟ್, ಅರಿಫುಲ್ ಇಸ್ಲಾಂ 41, ಅಹ್ರರ್ ಅಮಿನ್ 5, ಮೊಹಮ್ಮದ್ ಶಿಹಬ್ ಜೇಮ್ಸ್ 54, ನಾಯಕ ಮಹ್ಫಜುರ್ ರಹಮಾನ್ ರಾಬ್ಬಿ 4, ರೋಹನತ್ ದೌಲಾ ಬೋರ್ಸೊನ್ ಡಕ್ಔಟ್, ಮೊಹಮ್ಮದ್ ಇಕ್ಬಾಲ್ ಹೊಸೈನ್ ಎಮ್ಮಾನ್ ಡಕ್ಔಟ್, ಮರುಫ್ ಮೃಧಾ 1 ಹಾಗೂ ಶೈಕ್ ಪೇವೆಝ್ ಜಿಬೊನ್ ಅಜೇಯ 15 ರನ್ ಗಳಿಸಿದರು.
ಭಾರತದ ಪರ ಸೌಮಿ ಪಾಂಡೆ 4 ವಿಕೆಟ್, ಮುಶೀರ್ ಖಾನ್ 2 ವಿಕೆಟ್, ರಾಜ್ ಲಿಂಬಾನಿ, ಅರ್ಶಿನ್ ಕುಲ್ಕರ್ಣಿ ಹಾಗೂ ಪ್ರಿಯಂಶು ಮೊಲಿಯಾ ತಲಾ ಒಂದೊಂದು ವಿಕೆಟ್ ಪಡೆದರು.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…