BREAKING NEWS

Under 19 wordlcup: ಸೂಪರ್‌ 6 ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಪ್ರಸ್ತುತ ನಡೆಯುತ್ತಿರುವ ಅಂಡರ್‌ 19 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಸೂಪರ್‌ ಸಿಕ್ಸ್‌ ಸುತ್ತಿಗೆ ಲೀಗ್‌ ಹಂತದ ಎಲ್ಲಾ ಪಂದ್ಯಗಳಲ್ಲಿಯೂ ಗೆಲ್ಲುವುದರ ಮೂಲಕ ಪ್ರವೇಶ ಪಡೆದುಕೊಂಡಿದ್ದು, ಇಂದು ( ಜನವರಿ 30 ) ನಡೆದ ಸೂಪರ್‌ ಸಿಕ್ಸ್‌ ಹಂತದ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 214 ರನ್‌ಗಳ ಭರ್ಜರಿ ಗೆಲುವನ್ನು ಸಾಧಿಸಿದೆ.

ಬ್ಲೋಮ್‌ಫಾಂಟೈನ್ ಮಾಂಗ್ವಾಂಗ್‌ ಓವಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ‌ ಮುಶೀರ್‌ ಖಾನ್‌ ಶತಕದ ನೆರವಿನಿಂದ 295 ರನ್‌ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್‌ಗೆ 296 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ದೊಡ್ಡ ಮಟ್ಟದಲ್ಲಿ ವಿಫಲವಾದ ನ್ಯೂಜಿಲೆಂಡ್‌ 28.1 ಓವರ್‌ಗಳಲ್ಲಿ 81 ರನ್‌ಗಳಿಗೆ ಆಲ್‌ಔಟ್‌ ಆಗಿದೆ.
ಭಾರತದ ಇನ್ನಿಂಗ್ಸ್: ತಂಡದ ಪರ ಆರಂಭಿಕ ಆಟಗಾರ ಆದರ್ಶ್‌ ಸಿಂಗ್‌ 52 ರನ್‌ ಬಾರಿಸಿದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮುಶೀರ್‌ ಖಾನ್‌ 131 ರನ್‌ ಬಾರಿಸಿದರು. ಇನ್ನುಳಿದಂತೆ ಅರ್ಶಿನ್‌ ಕುಲ್ಕರ್ಣಿ 9, ನಾಯಕ ಉದಯ್‌ ಸಹರಣ್‌ 34, ಅರವೆಳ್ಳಿ ಅವಿನಾಶ್‌ 17, ಪ್ರಿಯಾಂಶು ಮೊಲಿಯಾ 10, ಸಚಿನ್‌ ದಾಸ್‌ 15, ಮುರುಗನ್‌ ಅಭಿಷೇಕ್‌ 4, ನಮನ್‌ ತಿವಾರಿ ಅಜೇಯ 3 ಹಾಗೂ ರಾಜ್‌ ಲಿಂಬಾಣಿ ಅಜೇಯ 2 ರನ್‌ ಕಲೆಹಾಕಿದರು. ನ್ಯೂಜಿಲೆಂಡ್‌ ಪರ ಮೇಸನ್‌ ಕ್ಲಾರ್ಕ್‌ 4 ವಿಕೆಟ್‌, ರಾನ್‌ ಸೌಗರ್ಸ್‌, ಇವಾಲ್ಡ್ ಚ್ರ್ಯೂಡರ್‌, ಜಾಕ್‌ ಕಮ್ಮಿಂಗ್‌ ಹಾಗೂ ಒಲಿವರ್‌ ತೆವಾಟಿಯಾ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.
ನ್ಯೂಜಿಲೆಂಡ್‌ ಇನ್ನಿಂಗ್ಸ್:‌ ಭಾರತದ ಬೌಲಿಂಗ್‌ ದಾಳಿಗೆ ತತ್ತಿರಿಸಿದ ನ್ಯೂಜಿಲೆಂಡ್‌ ಪರ ಯಾವೊಬ್ಬ ಆಟಗಾರ ಸಹ ಇಪ್ಪಂತರ ಗಡಿ ದಾಟಲಿಲ್ಲ. ಟಾಮ್‌ ಜೋನ್ಸ್‌ 0, ಜೇಮ್ಸ್‌ ನೆಲ್ಸನ್‌ 10, ಸ್ನೇಹಿತ್ ರೆಡ್ಡಿ ಡಕ್ಔಟ್‌, ಲಚ್ಲನ್‌ ಸ್ಟಾಕ್‌ಪೋಲ್‌ 5, ಆಸ್ಕರ್‌ ಜಾಕ್‌ಸನ್‌ 19, ಒಲಿವರ್‌ ತೆವಾಟಿಯಾ 7, ಜಾಕ್‌ ಕಮ್ಮಿಂಗ್‌ 16, ಅಲೆಕ್ಸ್‌ ಥಾಂಪ್ಸನ್‌ 12, ಇವಾಲ್ಡ್ ಚ್ರ್ಯೂಡರ್‌‌ 7, ರಾನ್‌ ಸೌಗರ್ಸ್‌ ಹಾಗೂ ಮೇಸನ್‌ ಕ್ಲಾರ್ಕ್‌ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.
ಭಾರತದ ಪರ ಸೌಮಿ ಪಾಂಡೆ 4, ರಾಜ್‌ ಲಿಂಬಾಣಿ 2, ಮುಶೀರ್‌ ಖಾನ್‌ 2, ನಮನ್‌ ತಿವಾರಿ ಹಾಗೂ ಅರ್ಶಿನ್‌ ಕುಲ್ಕರ್ಣಿ ತಲಾ ಒಂದೊಂದು ವಿಕೆಟ್‌ ಪಡೆದರು.
andolana

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

5 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

5 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

10 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

10 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

10 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

10 hours ago