ನವದೆಹಲಿ : ಮಿಝೋರಾಂನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆಯೊಂದು ಕುಸಿದು ಬಿದ್ದು 17 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಇನ್ನೂ ಹಲವರು ಸ್ಥಳದಲ್ಲಿ ಸಿಲುಕಿರುವ ಶಂಕೆ ಇದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಸೇತುವೆ ಕುಸಿದಾಗ ಸುಮಾರು 35 ರಿಂದ 40 ಕಟ್ಟಡ ಕಾರ್ಮಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐಝಾಲ್ ನಿಂದ ಸುಮಾರು 21 ಕಿ.ಮೀ. ದೂರದಲ್ಲಿರುವ ಸಾಯಿರಾಂಗ್ ಪ್ರದೇಶದಿಂದ ಈ ಘಟನೆ ವರದಿಯಾಗಿದೆ.
Under construction railway over bridge at Sairang, near Aizawl collapsed today; atleast 17 workers died: Rescue under progress.
Deeply saddened and affected by this tragedy. I extend my deepest condolences to all the bereaved families and wishing a speedy recovery to the… pic.twitter.com/IbmjtHSPT7
— Zoramthanga (@ZoramthangaCM) August 23, 2023
ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.





