ಬೆಂಗಳೂರು: ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ. ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಆಚರಿಸುವುದು ದೇವರಿಗೆ ಮಾಡುವ ಅವಮಾನ. ದೇವರನ್ನೇ ಮುಂದಿಟ್ಟುಕೊಂಡು ಜಾತಿ, ಧರ್ಮ ಸಂಘರ್ಷ ಸೃಷ್ಟಿಸುವ ವಿಕೃತಿಯನ್ನು ಈಗಲೂ ಆಚರಿಸಲಾಗುತ್ತಿದೆ ಎಂದು ಬೇಸರವ್ಯಕ್ತಪಡಿಸಿದರು.
ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಕಾರಣ ಆಗದಂತೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು. ಈ ತಾರತಮ್ಯಕ್ಕೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು ಎಂದು ನಾರಾಯಣ ಗುರುವನ್ನು ಸಿಎಂ ಸ್ಮರಿಸಿದರು.
ಪ್ರವೇಶ ಇಲ್ಲದ ದೇವಸ್ಥಾನಕ್ಕೆ ಹೋಗಬೇಡಿ ದೇವಸ್ಥಾನ ಕಟ್ಟಿ
ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದು ನಾರಾಯಣ ಗುರುಗಳು ಹೇಳಿದ್ದರು. ಈ ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನಗಳನ್ನು ನಿರ್ಮಿಸಿದರು. ಉಳಿದ ದೇವಸ್ಥಾನಗಳಿಗೆ ಪ್ರವೇಶ ಇಲ್ಲದ ಶೂದ್ರ ಮತ್ತು ದಲಿತ ಸಮುದಾಯವನ್ನು ತಾವೇ ಕಟ್ಟಿಸಿದ ದೇವಸ್ಥಾನಗಳಿಗೆ ಪ್ರವೇಶಿಸುವಂತೆ ಕ್ರಾಂತಿ ಮಾಡಿದರು ಎಂದು ಹಲವು ನಿದರ್ಶನಗಳನ್ನು ಉದಾಹರಿಸಿದರು. ವಿದ್ಯೆ ಕಲಿತು ಸ್ವತಂತ್ರರಾಗಿ, ಸಂಘಟಿತರಾಗಿ ಬಲಯುತರಾಗಿ ಎನ್ನುವುದು ನಾರಾಯಣಗುರುಗಳು ಶೂದ್ರ-ದಲಿತ ಸಮುದಾಯಕ್ಕೆ ನೀಡಿದ ಅತ್ಯುನ್ನತ ಧ್ಯೇಯ ಎಂದರು.
ನಾರಾಯಣ ಗುರುಗಳು ಒಂದು ಜಾತಿ ಸೀಮಿತವಲ್ಲ
ನಾರಾಯಣ ಗುರುಗಳು ಒಂದು ಜಾತಿ, ಧರ್ಮಕ್ಕೆ ಸೇರಿದವರಲ್ಲ. ಅವರು ಜಾತಿ-ಧರ್ಮದ ತಾರತಮ್ಯಗಳನ್ನು ಮೀರಿದ ವಿಶ್ವಮಾನವ. ಹೀಗಾಗಿ ವಿಶ್ವ ಮಾನವ ನಾರಾಯಣಗುರುಗಳ ಜಯಂತಿಯನ್ನು ಸರ್ಕಾರವೇ ಆಚರಿಸಬೇಕು ಎಂದು ಆದೇಶ ಮಾಡಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ಈಡಿಗ ಅಭಿವೃದ್ಧಿ ನಿಗಮ, ಭವನಕ್ಕೆ ಅನುದಾನ
ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ನಾರಾಯಣಗುರು ಭವನ ನಿರ್ಮಿಸಬೇಕು ಎನ್ನುವ ಸಮುದಾಯದ ಬೇಡಿಕೆಗೆ ಒಪ್ಪಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಎರಡು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಈಡಿಗ ಸಮಾಜಕ್ಕೆ ನೀಡಿದರು.
ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಎಚ್.ಆರ್.ಗವಿಯಪ್ಪ, ಆರ್ಯ ಈಡಿಗ ಸಮಾಜದ ಅಧ್ಯಕ್ಷರಾದ ಡಾ.ಎಂ.ತಿಮ್ಮೇಗೌಡರು ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…