BREAKING NEWS

ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ. ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಆಚರಿಸುವುದು ದೇವರಿಗೆ ಮಾಡುವ ಅವಮಾನ. ದೇವರನ್ನೇ ಮುಂದಿಟ್ಟುಕೊಂಡು ಜಾತಿ, ಧರ್ಮ ಸಂಘರ್ಷ ಸೃಷ್ಟಿಸುವ ವಿಕೃತಿಯನ್ನು ಈಗಲೂ ಆಚರಿಸಲಾಗುತ್ತಿದೆ ಎಂದು ಬೇಸರವ್ಯಕ್ತಪಡಿಸಿದರು.

ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಕಾರಣ ಆಗದಂತೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು. ಈ ತಾರತಮ್ಯಕ್ಕೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು ಎಂದು ನಾರಾಯಣ ಗುರುವನ್ನು ಸಿಎಂ ಸ್ಮರಿಸಿದರು.

ಪ್ರವೇಶ ಇಲ್ಲದ ದೇವಸ್ಥಾನಕ್ಕೆ ಹೋಗಬೇಡಿ ದೇವಸ್ಥಾನ ಕಟ್ಟಿ

ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದು ನಾರಾಯಣ ಗುರುಗಳು ಹೇಳಿದ್ದರು. ಈ ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ‌ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನಗಳನ್ನು ನಿರ್ಮಿಸಿದರು. ಉಳಿದ ದೇವಸ್ಥಾನಗಳಿಗೆ ಪ್ರವೇಶ ಇಲ್ಲದ ಶೂದ್ರ ಮತ್ತು ದಲಿತ ಸಮುದಾಯವನ್ನು ತಾವೇ ಕಟ್ಟಿಸಿದ ದೇವಸ್ಥಾನಗಳಿಗೆ ಪ್ರವೇಶಿಸುವಂತೆ ಕ್ರಾಂತಿ ಮಾಡಿದರು ಎಂದು ಹಲವು ನಿದರ್ಶನಗಳನ್ನು ಉದಾಹರಿಸಿದರು. ವಿದ್ಯೆ ಕಲಿತು ಸ್ವತಂತ್ರರಾಗಿ, ಸಂಘಟಿತರಾಗಿ ಬಲಯುತರಾಗಿ ಎನ್ನುವುದು ನಾರಾಯಣಗುರುಗಳು ಶೂದ್ರ-ದಲಿತ ಸಮುದಾಯಕ್ಕೆ ನೀಡಿದ ಅತ್ಯುನ್ನತ ಧ್ಯೇಯ ಎಂದರು.

ನಾರಾಯಣ ಗುರುಗಳು ಒಂದು ಜಾತಿ ಸೀಮಿತವಲ್ಲ

ನಾರಾಯಣ ಗುರುಗಳು ಒಂದು ಜಾತಿ, ಧರ್ಮಕ್ಕೆ ಸೇರಿದವರಲ್ಲ. ಅವರು ಜಾತಿ-ಧರ್ಮದ ತಾರತಮ್ಯಗಳನ್ನು ಮೀರಿದ ವಿಶ್ವಮಾನವ. ಹೀಗಾಗಿ ವಿಶ್ವ ಮಾನವ ನಾರಾಯಣಗುರುಗಳ ಜಯಂತಿಯನ್ನು ಸರ್ಕಾರವೇ ಆಚರಿಸಬೇಕು ಎಂದು ಆದೇಶ ಮಾಡಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈಡಿಗ ಅಭಿವೃದ್ಧಿ ನಿಗಮ, ಭವನಕ್ಕೆ ಅನುದಾನ

ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ನಾರಾಯಣಗುರು ಭವನ ನಿರ್ಮಿಸಬೇಕು ಎನ್ನುವ ಸಮುದಾಯದ ಬೇಡಿಕೆಗೆ ಒಪ್ಪಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಎರಡು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಈಡಿಗ ಸಮಾಜಕ್ಕೆ ನೀಡಿದರು.

ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಎಚ್.ಆರ್.ಗವಿಯಪ್ಪ, ಆರ್ಯ ಈಡಿಗ ಸಮಾಜದ ಅಧ್ಯಕ್ಷರಾದ ಡಾ.ಎಂ.ತಿಮ್ಮೇಗೌಡರು ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

58 mins ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

1 hour ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

1 hour ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

2 hours ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

2 hours ago