BREAKING NEWS

ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ. ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಆಚರಿಸುವುದು ದೇವರಿಗೆ ಮಾಡುವ ಅವಮಾನ. ದೇವರನ್ನೇ ಮುಂದಿಟ್ಟುಕೊಂಡು ಜಾತಿ, ಧರ್ಮ ಸಂಘರ್ಷ ಸೃಷ್ಟಿಸುವ ವಿಕೃತಿಯನ್ನು ಈಗಲೂ ಆಚರಿಸಲಾಗುತ್ತಿದೆ ಎಂದು ಬೇಸರವ್ಯಕ್ತಪಡಿಸಿದರು.

ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಕಾರಣ ಆಗದಂತೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು. ಈ ತಾರತಮ್ಯಕ್ಕೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು ಎಂದು ನಾರಾಯಣ ಗುರುವನ್ನು ಸಿಎಂ ಸ್ಮರಿಸಿದರು.

ಪ್ರವೇಶ ಇಲ್ಲದ ದೇವಸ್ಥಾನಕ್ಕೆ ಹೋಗಬೇಡಿ ದೇವಸ್ಥಾನ ಕಟ್ಟಿ

ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದು ನಾರಾಯಣ ಗುರುಗಳು ಹೇಳಿದ್ದರು. ಈ ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ‌ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನಗಳನ್ನು ನಿರ್ಮಿಸಿದರು. ಉಳಿದ ದೇವಸ್ಥಾನಗಳಿಗೆ ಪ್ರವೇಶ ಇಲ್ಲದ ಶೂದ್ರ ಮತ್ತು ದಲಿತ ಸಮುದಾಯವನ್ನು ತಾವೇ ಕಟ್ಟಿಸಿದ ದೇವಸ್ಥಾನಗಳಿಗೆ ಪ್ರವೇಶಿಸುವಂತೆ ಕ್ರಾಂತಿ ಮಾಡಿದರು ಎಂದು ಹಲವು ನಿದರ್ಶನಗಳನ್ನು ಉದಾಹರಿಸಿದರು. ವಿದ್ಯೆ ಕಲಿತು ಸ್ವತಂತ್ರರಾಗಿ, ಸಂಘಟಿತರಾಗಿ ಬಲಯುತರಾಗಿ ಎನ್ನುವುದು ನಾರಾಯಣಗುರುಗಳು ಶೂದ್ರ-ದಲಿತ ಸಮುದಾಯಕ್ಕೆ ನೀಡಿದ ಅತ್ಯುನ್ನತ ಧ್ಯೇಯ ಎಂದರು.

ನಾರಾಯಣ ಗುರುಗಳು ಒಂದು ಜಾತಿ ಸೀಮಿತವಲ್ಲ

ನಾರಾಯಣ ಗುರುಗಳು ಒಂದು ಜಾತಿ, ಧರ್ಮಕ್ಕೆ ಸೇರಿದವರಲ್ಲ. ಅವರು ಜಾತಿ-ಧರ್ಮದ ತಾರತಮ್ಯಗಳನ್ನು ಮೀರಿದ ವಿಶ್ವಮಾನವ. ಹೀಗಾಗಿ ವಿಶ್ವ ಮಾನವ ನಾರಾಯಣಗುರುಗಳ ಜಯಂತಿಯನ್ನು ಸರ್ಕಾರವೇ ಆಚರಿಸಬೇಕು ಎಂದು ಆದೇಶ ಮಾಡಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈಡಿಗ ಅಭಿವೃದ್ಧಿ ನಿಗಮ, ಭವನಕ್ಕೆ ಅನುದಾನ

ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ನಾರಾಯಣಗುರು ಭವನ ನಿರ್ಮಿಸಬೇಕು ಎನ್ನುವ ಸಮುದಾಯದ ಬೇಡಿಕೆಗೆ ಒಪ್ಪಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಎರಡು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಈಡಿಗ ಸಮಾಜಕ್ಕೆ ನೀಡಿದರು.

ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಎಚ್.ಆರ್.ಗವಿಯಪ್ಪ, ಆರ್ಯ ಈಡಿಗ ಸಮಾಜದ ಅಧ್ಯಕ್ಷರಾದ ಡಾ.ಎಂ.ತಿಮ್ಮೇಗೌಡರು ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago