BREAKING NEWS

ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ. ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಆಚರಿಸುವುದು ದೇವರಿಗೆ ಮಾಡುವ ಅವಮಾನ. ದೇವರನ್ನೇ ಮುಂದಿಟ್ಟುಕೊಂಡು ಜಾತಿ, ಧರ್ಮ ಸಂಘರ್ಷ ಸೃಷ್ಟಿಸುವ ವಿಕೃತಿಯನ್ನು ಈಗಲೂ ಆಚರಿಸಲಾಗುತ್ತಿದೆ ಎಂದು ಬೇಸರವ್ಯಕ್ತಪಡಿಸಿದರು.

ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಕಾರಣ ಆಗದಂತೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು. ಈ ತಾರತಮ್ಯಕ್ಕೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು ಎಂದು ನಾರಾಯಣ ಗುರುವನ್ನು ಸಿಎಂ ಸ್ಮರಿಸಿದರು.

ಪ್ರವೇಶ ಇಲ್ಲದ ದೇವಸ್ಥಾನಕ್ಕೆ ಹೋಗಬೇಡಿ ದೇವಸ್ಥಾನ ಕಟ್ಟಿ

ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದು ನಾರಾಯಣ ಗುರುಗಳು ಹೇಳಿದ್ದರು. ಈ ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ‌ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನಗಳನ್ನು ನಿರ್ಮಿಸಿದರು. ಉಳಿದ ದೇವಸ್ಥಾನಗಳಿಗೆ ಪ್ರವೇಶ ಇಲ್ಲದ ಶೂದ್ರ ಮತ್ತು ದಲಿತ ಸಮುದಾಯವನ್ನು ತಾವೇ ಕಟ್ಟಿಸಿದ ದೇವಸ್ಥಾನಗಳಿಗೆ ಪ್ರವೇಶಿಸುವಂತೆ ಕ್ರಾಂತಿ ಮಾಡಿದರು ಎಂದು ಹಲವು ನಿದರ್ಶನಗಳನ್ನು ಉದಾಹರಿಸಿದರು. ವಿದ್ಯೆ ಕಲಿತು ಸ್ವತಂತ್ರರಾಗಿ, ಸಂಘಟಿತರಾಗಿ ಬಲಯುತರಾಗಿ ಎನ್ನುವುದು ನಾರಾಯಣಗುರುಗಳು ಶೂದ್ರ-ದಲಿತ ಸಮುದಾಯಕ್ಕೆ ನೀಡಿದ ಅತ್ಯುನ್ನತ ಧ್ಯೇಯ ಎಂದರು.

ನಾರಾಯಣ ಗುರುಗಳು ಒಂದು ಜಾತಿ ಸೀಮಿತವಲ್ಲ

ನಾರಾಯಣ ಗುರುಗಳು ಒಂದು ಜಾತಿ, ಧರ್ಮಕ್ಕೆ ಸೇರಿದವರಲ್ಲ. ಅವರು ಜಾತಿ-ಧರ್ಮದ ತಾರತಮ್ಯಗಳನ್ನು ಮೀರಿದ ವಿಶ್ವಮಾನವ. ಹೀಗಾಗಿ ವಿಶ್ವ ಮಾನವ ನಾರಾಯಣಗುರುಗಳ ಜಯಂತಿಯನ್ನು ಸರ್ಕಾರವೇ ಆಚರಿಸಬೇಕು ಎಂದು ಆದೇಶ ಮಾಡಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈಡಿಗ ಅಭಿವೃದ್ಧಿ ನಿಗಮ, ಭವನಕ್ಕೆ ಅನುದಾನ

ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ನಾರಾಯಣಗುರು ಭವನ ನಿರ್ಮಿಸಬೇಕು ಎನ್ನುವ ಸಮುದಾಯದ ಬೇಡಿಕೆಗೆ ಒಪ್ಪಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಎರಡು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಈಡಿಗ ಸಮಾಜಕ್ಕೆ ನೀಡಿದರು.

ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಎಚ್.ಆರ್.ಗವಿಯಪ್ಪ, ಆರ್ಯ ಈಡಿಗ ಸಮಾಜದ ಅಧ್ಯಕ್ಷರಾದ ಡಾ.ಎಂ.ತಿಮ್ಮೇಗೌಡರು ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

6 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

17 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago